ಶಂಕರಾಚಾರ್ಯ ಸ್ವಾಮೀಜಿ 
ದೇಶ

ಮಹಾ ಕುಂಭ ಅಲ್ಲ, ಮೃತ್ಯು ಕುಂಭ!: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಶಂಕರಾಚಾರ್ಯ ಸ್ವಾಮೀಜಿ ಬೆಂಬಲ!

ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು 'ಮೃತ್ಯುಕುಂಭ' ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮಧ್ಯೆ ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ANI ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸ್ವಾಮೀಜಿ, 300 ಕಿಲೋಮೀಟರ್‌ಗಳಷ್ಟು ದಟ್ಟಣೆ ಕಂಡುಬರುತ್ತಿದೆ. ಇದನ್ನು ಅವ್ಯವಸ್ಥೆ ಎನ್ನದೇ ಇನ್ನೇನು ಅಂತಾ ಕರೆಯಬೇಕು? ಎಂದು ಪ್ರಶ್ನಿಸಿದ್ದಾರೆ.

ಜನರು ತಮ್ಮ ಲಗ್ಗೇಜುಗಳೊಂದಿಗೆ 25-30 ಕಿಲೋ ಮೀಟರ್ ನಡೆದು ಹೋಗುತ್ತಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ಸ್ನಾನದ ಜಾಗದಲ್ಲಿ, ಕೊಳಚೆ ಮತ್ತು ಒಳಚರಂಡಿ ನೀರು ಹರಿದು ಬರುತ್ತಿದೆ. ಅದು ಸ್ನಾನ ಮಾಡಲು ಯೋಗ್ಯವಲ್ಲಾ ಅಂತಾ ವಿಜ್ಞಾನಿಗಳು ಹೇಳುತ್ತಿದ್ದಾರೆ. ಆದಾಗ್ಯೂ, ಅಲ್ಲಿಯೇ ಸ್ನಾನ ಮಾಡುವಂತೆ ಕೋಟ್ಯಂತರ ಜನರನ್ನು ಒತ್ತಾಯಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಒಟ್ಟಾರೇ ಸಂಖ್ಯೆಯನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸುತ್ತಿದೆ. ದಟ್ಟಣೆ ನಿರ್ವಹಣೆ ಹಾಗೂ ಅತಿಥ್ಯ ನಿಯಮಗಳನ್ನು ಪಾಲಿಸಿಲ್ಲ.ಜನರು ಸಾಯುತ್ತಿದ್ದರೂ ಅದನ್ನು ಮುಚ್ಚಿಸಲು ಸರ್ಕಾರ ಪ್ರಯತ್ನಿಸಿದೆ. ಇದೊಂದು ಘೋರ ಅಪರಾಧವಾಗಿದೆ. ಇಂತಹ ಸಂದರ್ಭದಲ್ಲಿಯಾರಾದರೂ ಮಹಾ ಕುಂಭ ಮೇಳದ ವ್ಯವಸ್ಥೆಯನ್ನು ಟೀಕಿಸಿದರೆ ಅದನ್ನು ನಾವು ವಿರೋಧಿಸಲು ಸಾಧ್ಯವಿಲ್ಲ ಎಂದು ಶಂಕರಾಚಾರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT