ದೆಹಲಿ ಸಂಪುಟ ಸಭೆ  online desk
ದೇಶ

ದೆಹಲಿ ಸರ್ಕಾರದ ಮೊದಲ ಸಂಪುಟ ಸಭೆ: ಆಯುಷ್ಮಾನ್ ಭಾರತ್ ಯೋಜನೆ ಸೇರಿದಂತೆ ಪ್ರಮುಖ ನಿರ್ಣಯ ಅಂಗೀಕಾರ

ಭಾರತೀಯ ಜನತಾ ಪಕ್ಷದ ನೇತೃತ್ವದ ದೆಹಲಿ ಸಚಿವ ಸಂಪುಟ ತನ್ನ ಮೊದಲ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ ಎಂದು ಸಚಿವ ಪಂಕಜ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ದೆಹಲಿ: ದೆಹಲಿಯಲ್ಲಿ ಇಂದಿನಿಂದ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಇಂದು (ಫೆ.20) ರಂದು ಸಂಜೆ ನಡೆದಿದೆ.

ಭಾರತೀಯ ಜನತಾ ಪಕ್ಷದ ನೇತೃತ್ವದ ದೆಹಲಿ ಸಚಿವ ಸಂಪುಟ ತನ್ನ ಮೊದಲ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ ಎಂದು ಸಚಿವ ಪಂಕಜ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ಇದೇ ವೇಳೆ ದೆಹಲಿ ಸರ್ಕಾರದ ಖಾತೆಗಳನ್ನು ಸಂಪುಟ ಸಭೆಯಲ್ಲಿ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಹಣಕಾಸು, ಸೇವೆಗಳು ಮತ್ತು ಜಾಗೃತ ಖಾತೆಯನ್ನು ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಪರ್ವೇಶ್ ವರ್ಮಾ ಅವರಿಗೆ ಲೋಕೋಪಯೋಗಿ ಇಲಾಖೆ, ನೀರು, ಶಾಸಕಾಂಗ ವ್ಯವಹಾರಗಳು, ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಖಾತೆ ನೀಡಲಾಗಿದೆ.

ಆಶಿಶ್ ಸೂದ್ ಅವರಿಗೆ ಗೃಹ, ವಿದ್ಯುತ್, ನಗರಾಭಿವೃದ್ಧಿ ಮತ್ತು ಶಿಕ್ಷಣ ಖಾತೆ ನೀಡಲಾಗಿದ್ದರೆ, ಮಂಜಿಂದರ್ ಸಿರ್ಸಾ ಅವರಿಗೆ ಕೈಗಾರಿಕೆಗಳು ಮತ್ತು ಪರಿಸರ ಖಾತೆ ನೀಡಲಾಗಿದೆ.

ದೆಹಲಿ ವಿಧಾನಸಭೆಯ ಮೊದಲ ಸದನ ಸಭೆಯಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ 14 ಸಿಎಜಿ ವರದಿಗಳನ್ನು ಮಂಡಿಸುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT