ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್, ಸಿಎಂ ಮಮತಾ ಬ್ಯಾನರ್ಜಿ 
ದೇಶ

ಕುಂಭ ಮೇಳ 'ಮುಕ್ತಿ ಮೇಳ': ಸಿಎಂ ಮಮತಾ ಬ್ಯಾನರ್ಜಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ತಿರುಗೇಟು!

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರ ಸಾವನ್ನು ಉಲ್ಲೇಖಿಸಿ ಮಹಾ ಕುಂಭ ಮೇಳವನ್ನು ಮೃತ್ಯುಕುಂಭ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಕೊಲ್ಕತ್ತಾ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು 'ಮುಕ್ತಿ ಮೇಳ' ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಗುರುವಾರ ಹೇಳಿದ್ದಾರೆ. ಈ ಮೂಲಕ ಕುಂಭ ಮೇಳ ಮೃತ್ಯುಕುಂಭ ಎಂದಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರ ಸಾವನ್ನು ಉಲ್ಲೇಖಿಸಿ ಮಹಾ ಕುಂಭ ಮೇಳವನ್ನು ಮೃತ್ಯುಕುಂಭ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಪಾಲರು, ಕುಂಭ ಮೇಳ ಆಚರಣೆಯಲ್ಲಿ ವಿನಮ್ರನಾಗಿ ಪಾಲ್ಗೊಳ್ಳಲು ಅಲ್ಲಿಗೆ ಹೋಗಿದ್ದೆ. ಕುಂಭ ಮೇಳ ಮುಕ್ತಿ ಮೇಳ, ಮೃತ್ಯುಂಜಯ ಮೇಳ ಎಂದು ಬಣ್ಣಿಸಿದರು. ಆನಂದ್ ಬೋಸ್ ಅವರು ಕೂಡಾ ಪ್ರಯಾಗ್ ರಾಜ್ ಗೆ ತೆರಳಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು.

"ನಿಮಗೆ ಗೊತ್ತಾ, ಕುಂಭಮೇಳವನ್ನು ಭಾರತ ಹೊಂದಿರುವ ಶ್ರೇಷ್ಠ ಸಂಪ್ರದಾಯದ ಪ್ರತೀಕವಾಗಿ ನೋಡುತ್ತೇನೆ. ಕುಂಭವು ದೇವರೊಂದಿಗಿನ ಸಹಭಾಗಿತ್ವವಾಗಿದೆ. ಜನಸಾಮಾನ್ಯರು ಸ್ವಯಂ ಪ್ರೇರಣೆಯಿಂದ ಅಲ್ಲಿಗೆ ಬರುತ್ತಿದ್ದಾರೆ.

ಲಕ್ಷ ಲಕ್ಷ ಜನ ತಾವಾಗಿಯೇ ಅಲ್ಲಿಗೆ ಬಂದಿದ್ದರು. ಇದು ಆಕಾಶದೊಂದಿಗೆ ಭೂಮಿ, ದೇವರೊಂದಿಗೆ ಮಾನವ ಮತ್ತು ಆಂತರಿಕ ಪ್ರಪಂಚವನ್ನು ಬಾಹ್ಯ ಪ್ರಪಂಚದೊಂದಿಗೆ ಸಂಪರ್ಕಿಸುವ ಕಾಮನಬಿಲ್ಲಿನ ಸೇತುವೆ. ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯ ಶ್ರೇಷ್ಠತೆ ಎಂದು ಭಾವಿಸುತ್ತೇನೆ ಎಂದರು.

ಯಾವುದೇ ವಿವಾದ ಹುಟ್ಟಿಕೊಳ್ಳಲು ನಾನು ಬಯಸುವುದಿಲ್ಲ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆ. ಯಾವುದೇ ಪರಿಸ್ಥಿತಿ ಬಗ್ಗೆ ತನ್ನದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಮುಖ್ಯಮಂತ್ರಿ ಅರ್ಹರಿದ್ದಾರೆ. ಇಂತಹ ಪ್ರಜಾಪ್ರಭುತ್ವದ ಸೌಂದರ್ಯನನ್ನು ನಾನು ಸ್ವಾಗತಿಸುತ್ತೇನೆ. ಆದರೆ, ರಾಜ್ಯಪಾಲನಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ರಾಜಕೀಯ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!