ಮಹಾರಾಣಾ ಪ್ರತಾಪ್ ಪ್ರತಿಮೆ ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಮಸೀದಿ ಮುಂಭಾಗ ಮಹಾರಾಣಾ ಪ್ರತಾಪ್ ಪ್ರತಿಮೆ ಸ್ಥಾಪನೆ; ಆಕ್ಷೇಪಣೆ ಹಿಂಪಡೆದ ಮುಸ್ಲಿಂ ನಿಯೋಗ!

ಬುಧವಾರ ನನ್ನ ಕಚೇರಿಗೆ ಆಗಮಿಸಿದ್ದ ಮುಸ್ಲಿಂ ಸುಧಾರ್ ಸಭಾ ಮುಖ್ಯಸ್ಥರು ಹಾಗೂ ಸಮಿತಿ ಸದಸ್ಯರು ಪ್ರತಿಮೆ ಸ್ಥಾಪನೆಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ಪತ್ರ ಸಲ್ಲಿಸಿದ್ದಾರೆ.

ಹಮೀರ್ ಪುರ: ಹಿಮಾಚಲ ಪ್ರದೇಶದ ಸುಜಾನ್ ಪುರ ತಿರಾದಲ್ಲಿ ಮಸೀದಿ ಮುಂಭಾಗದಲ್ಲಿ ಮಹಾರಾಣಾ ಪ್ರತಾಪ್ ಪ್ರತಿಮೆ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯ ಸಲ್ಲಿಸಿದ್ದ ಆಕ್ಷೇಪಣೆಯನ್ನು ಹಿಂಪಡೆದಿದೆ. ಪ್ರತಿಮೆ ಸ್ಥಾಪನೆಗೆ ಮುಸ್ಲಿಂ ಸುಧಾರ್ ಸಭಾ ಬೆಂಬಲ ವ್ಯಕ್ತಪಡಿಸಿದೆ.

ಸಮುದಾಯದ ಕೆಲವರು ಪ್ರತಿಮೆ ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಗರ ಪರಿಷತ್ ಕಾರ್ಯಕಾರಿ ಅಧಿಕಾರಿ ಅಜ್ಮೀರ್ ಠಾಕೂರ್ ಗುರುವಾರ ಹೇಳಿದ್ದಾರೆ. ವಾರ್ಡ್ ಸಂಖ್ಯೆ 4 ರಲ್ಲಿ ಮಸೀದಿಯ ಮುಂಭಾಗದ ಉದ್ಯಾನವನದಲ್ಲಿ ಮಹಾರಾಣಾ ಪ್ರತಾಪ್ ಪ್ರತಿಮೆಯನ್ನು ಸ್ಥಾಪಿಸದಂತೆ ಮುಸ್ಲಿಂ ಸಮುದಾಯದ ನಿಯೋಗವು ಹಮೀರ್‌ಪುರ ಆಡಳಿತಕ್ಕೆ ಮನವಿ ಸಲ್ಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆಯಾಗಿದೆ.

ಮನವಿ ಪತ್ರಕ್ಕೆ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್, ಅನುಮೋದಿತ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸುವ ನಿರ್ಧಾರದಿಂದ ಹಿಂದೆ ಸರಿಯದಂತೆ ಆಡಳಿತಕ್ಕೆ ಹೇಳಿತ್ತು. ಈ ವಿಷಯದ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರಿಗೆ ಸೂಚಿಸಿದ್ದರು.

ಬುಧವಾರ ನನ್ನ ಕಚೇರಿಗೆ ಆಗಮಿಸಿದ್ದ ಮುಸ್ಲಿಂ ಸುಧಾರ್ ಸಭಾ ಮುಖ್ಯಸ್ಥರು ಹಾಗೂ ಸಮಿತಿ ಸದಸ್ಯರು ಪ್ರತಿಮೆ ಸ್ಥಾಪನೆಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ಪತ್ರ ಸಲ್ಲಿಸಿದ್ದಾರೆ. ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಾಣವನ್ನು ಸ್ವಾಗತಿಸಿದ್ದು, ಎರಡೂ ಸಮುದಾಯಗಳು ಶಾಂತಿಯುತ ಸಹಭಾಳ್ವೆ ನಡೆಸಲು ಸಮಿತಿ ಮುಖಂಡರು ಹೇಳಿದ್ದಾರೆ ಎಂದು ಠಾಕೂರ್ ತಿಳಿಸಿದ್ದಾರೆ.

ಪ್ರತಿಮೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹಿಂಪಡೆದಿದ್ದೇವೆ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ.

ಸೋಮವಾರ ರಾತ್ರಿ ಮುಸ್ಲಿಂ ನಿಯೋಗ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಈ ವಿಡಿಯೋ ವೈರಲ್ ಆಗಿತ್ತು. ಮಾರನೇ ದಿನ ಸ್ಥಳೀಯ ಸಂಸ್ಥೆ ಸೂಚಿಸಿದ್ದ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಹೇಳಿತ್ತು. ಮಹಾರಾಣಾ ಪ್ರತಾಪ್ ಪ್ರತಿಮೆಗೆ ವಿರೋಧ ವ್ಯಕ್ತಪಡಿಸುವುದು ನ್ಯಾಯ ಸಮ್ಮತವಲ್ಲ. ಹೊರಗಡೆಯಿಂದ ಬಂದಿರುವ ಮುಸ್ಲಿಂ ಮುಖಂಡರು ಹಿಂದೂ ವಿರೋಧಿ ಭಾವನೆ ಸೃಷ್ಟಿಸುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪಂಕಜ್ ಭಾರತೀಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT