ಗೌರವ್ ಗೊಗೊಯ್, ಅವರ ಪತ್ನಿ ಎಲಿಜಬೆತ್ ಹಾಗೂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಾಂದರ್ಭಿಕ ಚಿತ್ರ 
ದೇಶ

ಗೌರವ್ ಗೊಗೊಯ್ ಪತ್ನಿಯೊಂದಿಗೆ ಪಾಕ್ ಪ್ರಜೆ ನಂಟು, 18 ಬಾರಿ ಭಾರತಕ್ಕೆ ಭೇಟಿ: ಹಿಮಂತ ಬಿಸ್ವಾ ಶರ್ಮಾ

ಅಲಿ ತೌಕೀರ್ ಶೇಖ್ ಭಾರತಕ್ಕೆ 18 ಬಾರಿ ಭೇಟಿ ನೀಡಿದ್ದರು ಎಂದು ಪ್ರಕರಣದ ಕುರಿತು ಅಸ್ಸಾಂ ಪೊಲೀಸ್ ಎಸ್‌ಐಟಿ ಪತ್ತೆ ಮಾಡಿದೆ. ಅವರನ್ನು ಯಾರು ಆಹ್ವಾನಿಸಿ, ಆತಿಥ್ಯ ನೀಡಿದ್ದರು ಎಂಬುದು ಈಗ ತಿಳಿಯಬೇಕಾಗಿದೆ

ಗುವಾಹಟಿ: ಲೋಕಸಭೆಯ ವಿರೋಧ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಅವರ ಬ್ರಿಟಿಷ್ ಪತ್ನಿಯೊಂದಿಗೆ ನಂಟಿರುವ ಪಾಕ್ ಪ್ರಜೆ ಅಲಿ ತೌಕೀರ್ ಶೇಖ್ ಇಲ್ಲಿಯವರೆಗೆ 18 ಬಾರಿ ಭಾರತಕ್ಕೆ ಭೇಟಿ ನೀಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ವಿಷಯ ತಿಳಿಸಿದ ಶರ್ಮಾ, ಪ್ರಕರಣದ ಆರಂಭಿಕ ಮಾಹಿತಿಯು ಕಾಂಗ್ರೆಸ್‌ಗೆ 'ಅತ್ಯಂತ ಮಾರಕ' ಮತ್ತು ಅಸ್ಸಾಂನ ರಾಜಕೀಯದ ಮೇಲೆ 'ದೊಡ್ಡ ಪರಿಣಾಮ' ಬೀರಲಿದೆ ಎಂದರು.

ಅಲಿ ತೌಕೀರ್ ಶೇಖ್ ಭಾರತಕ್ಕೆ 18 ಬಾರಿ ಭೇಟಿ ನೀಡಿದ್ದರು ಎಂದು ಪ್ರಕರಣದ ಕುರಿತು ಅಸ್ಸಾಂ ಪೊಲೀಸ್ ಎಸ್‌ಐಟಿ ಪತ್ತೆ ಮಾಡಿದೆ. ಅವರನ್ನು ಯಾರು ಆಹ್ವಾನಿಸಿ, ಆತಿಥ್ಯ ನೀಡಿದ್ದರು ಎಂಬುದು ಈಗ ತಿಳಿಯಬೇಕಾಗಿದೆ. ಇದು ಅಸ್ಸಾಂ ರಾಜಕೀಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಸತ್ಯಗಳು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮಾರಕವಾಗಲಿವೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದರು.

ಜವಾಬ್ದಾರಿಯುತ ವ್ಯಕ್ತಿಯಾಗಿ ವಿಧಾನಸಭೆಯೊಳಗೆ ನಿಂತು ಹೇಳುತ್ತಿದ್ದೇನೆ, ಶೇಖ್ ಜಾಲವನ್ನು ಬೇಧಿಸುತ್ತೇವೆ ಎಂದು ಅಸ್ಸಾಂ ವಿಧಾನಸಭೆಗೆ ಭರವಸೆ ನೀಡುತ್ತೇನೆ. ಮೂರು ತಿಂಗಳ ಕಾಲಾವಕಾಶ ನೀಡಿ, ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಎಲ್ಲವನ್ನೂ ತಿಳಿಸುತ್ತೇವೆ ಎಂದು ಅವರು ತಿಳಿಸಿದರು.

"ಶೇಖ್ ಅವರ ಟ್ವೀಟ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಅಸ್ಸಾಂ ವಲಸಿಗರ ಮೇಲೆ ಇವೆ. ಇದು ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನವಾಗಿದೆ" ಎಂದು ಅವರು ಆರೋಪಿಸಿದರು.

ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಪಾಕಿಸ್ತಾನದ ಬೇಹುಗಾರಿಕೆ ISI ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಾಗೂ ಬಿಜೆಪಿ ವಾಗ್ದಾಳಿ ನಡೆಸುತ್ತಿವೆ. ಅಸ್ಸಾಂ ಮತ್ತು ಭಾರತದ ಅಂತರಿಕ ವ್ಯವಹಾರ ಕುರಿತು"ಶೇಖ್ ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ಟ್ವೀಟ್ ಕುರಿತ ತನಿಖೆಗೆ ಅಸ್ಸಾಂ ಪೊಲೀಸರು ಸೋಮವಾರ ವಿಶೇಷ ತನಿಖಾ ತಂಡ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT