ಸುಪ್ರೀಂ ಕೋರ್ಟ್  
ದೇಶ

ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರುಗಳ ವಿಚಾರಣೆಗೆ ಅವಕಾಶ ನೀಡಿದ್ದ ಲೋಕ್ ಪಾಲ್ ಆದೇಶ: ಸುಪ್ರೀಂ ಕೋರ್ಟ್ ತಡೆ

ಜನವರಿ 27 ರಂದು ಲೋಕಪಾಲ್ ಹೊರಡಿಸಿದ್ದ ಆದೇಶಕ್ಕೆ ಆರಂಭಿಸಿದ್ದ ಸ್ವಯಂಪ್ರೇರಿತ ವಿಚಾರಣೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಪಟ್ಟವರಿಗೆ ನೊಟೀಸ್ ಜಾರಿ ಮಾಡಿದೆ.

ನವದೆಹಲಿ: ಹಾಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ದೂರುಗಳನ್ನು ಸ್ವೀಕರಿಸಿದ್ದ ಲೋಕಪಾಲ್ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ತಡೆಹಿಡಿದಿದ್ದು, ಇದು ತುಂಬಾ ಗೊಂದಲಕಾರಿಯಾಗಿದೆ ಎಂದು ಹೇಳಿದೆ.

ಜನವರಿ 27 ರಂದು ಲೋಕಪಾಲ್ ಹೊರಡಿಸಿದ್ದ ಆದೇಶಕ್ಕೆ ಆರಂಭಿಸಿದ್ದ ಸ್ವಯಂಪ್ರೇರಿತ ವಿಚಾರಣೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಪಟ್ಟವರಿಗೆ ನೊಟೀಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅಭಯ್ ಎಸ್ ಓಕಾ ಅವರನ್ನೂ ಒಳಗೊಂಡ ವಿಶೇಷ ಪೀಠವು, ದೂರುದಾರರು ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ತಡೆಯಾಜ್ಞೆ ನೀಡಿದೆ. ದೂರುದಾರರು ಸಲ್ಲಿಸಿದ ದೂರನ್ನು ಗೌಪ್ಯವಾಗಿಡುವಂತೆಯೂ ಅದು ಸೂಚಿಸಿದೆ.

ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಾಧೀಶರು, ರಾಜ್ಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿದ್ದಾರೆ ಮತ್ತು ಖಾಸಗಿ ಕಂಪನಿಯು ದೂರುದಾರರ ವಿರುದ್ಧ ಹೂಡಿದ್ದ ಮೊಕದ್ದಮೆಯನ್ನು ನಿಭಾಯಿಸಬೇಕಾಗಿದ್ದ ಅದೇ ಹೈಕೋರ್ಟ್‌ನ ನ್ಯಾಯಾಧೀಶರ ವಿರುದ್ಧ ಸಲ್ಲಿಸಲಾದ ಎರಡು ದೂರುಗಳ ಮೇಲೆ ಲೋಕಪಾಲ್ ಈ ಆದೇಶವನ್ನು ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT