ಬಿಎಸ್ ಪಿ ನಾಯಕಿ ಮಾಯಾವತಿ 
ದೇಶ

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿತ್ತು: ಮಾಯಾವತಿ

"ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ".

ಲಖನೌ: ಇತ್ತೀಚಿಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿ ಸ್ಪರ್ಧಿಸಿತ್ತು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ತಮ್ಮ ಪಕ್ಷದ ಪ್ರಸ್ತುತ ರಾಜಕೀಯ ವಿಧಾನವನ್ನು ಪ್ರಶ್ನಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ್ದಾರೆ.

ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸೇರದಿರುವುದರಿಂದ ನಿರಾಶೆಗೊಂಡಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ, "ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ" ಎಂದು ಟೀಕಿಸಿದ್ದಾರೆ.

"ಇಲ್ಲದಿದ್ದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಹೆಚ್ಚಿನ ಅಭ್ಯರ್ಥಿಗಳು ಠೇವಣಿಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗದಂತಹ ಕೆಟ್ಟ ಸ್ಥಿತಿಯಲ್ಲಿರುತ್ತಿರಲಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇತರರ ಕಡೆಗೆ ಬೆರಳು ತೋರಿಸುವ ಮೊದಲು, ಅವರು ಖಂಡಿತವಾಗಿಯೂ ತಮ್ಮದೇ ಆದ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ಮಾಯಾವತಿ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.

ದೆಹಲಿಯಲ್ಲಿರುವ ಹೊಸ ಬಿಜೆಪಿ ಸರ್ಕಾರಕ್ಕೆ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಸವಾಲು ಇದೆ ಎಂದು ಮಾಯಾವತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಬೇಸಿಗೆಯಲ್ಲಿ ಬತ್ತಿದ ಬೋರ್ ವೆಲ್ ಗಳು: ಬೆಂಗಳೂರಿನ ಧೋಬಿ ಘಾಟ್ ಗಳಲ್ಲಿ ನೀರಿನ ಅಭಾವ!

SCROLL FOR NEXT