ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿ TNIE
ದೇಶ

ಇಂದಿರಾ ಗಾಂಧಿ 'ಅಜ್ಜಿ' ಹೇಳಿಕೆ: ರಾಜಸ್ಥಾನ ವಿಧಾನಸಭೆಯಿಂದ 6 ಕಾಂಗ್ರೆಸ್ ಶಾಸಕರ ಅಮಾನತು; ಸದನದಲ್ಲಿ ಅಹೋರಾತ್ರಿ ಧರಣಿ!

ಅಮಾನತುಗೊಂಡಿರುವ ಶಾಸಕರಲ್ಲಿ ಗೋವಿಂದ್ ಸಿಂಗ್ ದೋಟಸಾರ, ರಾಮಕೇಶ್ ಮೀನಾ, ಹಕೀಮ್ ಅಲಿ ಖಾನ್, ಅಮೀನ್ ಕಾಗ್ಜಿ, ಜಾಕಿರ್ ಹುಸೇನ್ ಗಸಾವತ್ ಮತ್ತು ಸಂಜಯ್ ಕುಮಾರ್ ಸೇರಿದ್ದಾರೆ. ಈ ಅಮಾನತನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ಸದನದೊಳಗೆ ಧರಣಿ ನಡೆಸಿದ್ದಾರೆ.

ಜೈಪುರ: ರಾಜಸ್ಥಾನ ವಿಧಾನಸಭೆಯಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲಗಳ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಇಂದಿರಾ ಗಾಂಧಿಯನ್ನು 'ಅಜ್ಜಿ' ಎಂದು ಸಚಿವ ಅವಿನಾಶ್ ಗೆಹ್ಲೋಟ್ ನೀಡಿದ ಹೇಳಿಕೆಯಿಂದ ಉಂಟಾದ ಕೋಲಾಹಲದ ನಂತರ, ಆರು ಕಾಂಗ್ರೆಸ್ ಶಾಸಕರನ್ನು ಸಂಪೂರ್ಣ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಅಮಾನತುಗೊಂಡ ಶಾಸಕರು ಸದನದಲ್ಲಿಯೇ ರಾತ್ರಿ ಕಳೆಯಲು ನಿರ್ಧರಿಸಿದ್ದಾರೆ. ಅವರ ಹಾಸಿಗೆ ಮತ್ತು ಆಹಾರಕ್ಕಾಗಿ ವ್ಯವಸ್ಥೆ ಮಾಡಲಾಗುತ್ತಿದೆ.

ಅಮಾನತುಗೊಂಡಿರುವ ಶಾಸಕರಲ್ಲಿ ಗೋವಿಂದ್ ಸಿಂಗ್ ದೋಟಸಾರ, ರಾಮಕೇಶ್ ಮೀನಾ, ಹಕೀಮ್ ಅಲಿ ಖಾನ್, ಅಮೀನ್ ಕಾಗ್ಜಿ, ಜಾಕಿರ್ ಹುಸೇನ್ ಗಸಾವತ್ ಮತ್ತು ಸಂಜಯ್ ಕುಮಾರ್ ಸೇರಿದ್ದಾರೆ. ಈ ಅಮಾನತನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ಸದನದೊಳಗೆ ಧರಣಿ ನಡೆಸಿದ್ದಾರೆ. ಸರ್ಕಾರ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಮತ್ತು ನಿರಂಕುಶವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು.

ವಿಧಾನಸಭೆಯಲ್ಲಿ ಹೆಚ್ಚುತ್ತಿರುವ ಗದ್ದಲದ ನಡುವೆಯೇ, ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗೋವಿಂದ ಸಿಂಗ್ ದೋಟಸಾರ ಅವರು ಮಾಡಿದ್ದು ಸದನವನ್ನು ದುರ್ಬಲಗೊಳಿಸುವ ಪ್ರಯತ್ನ. ಕಾಂಗ್ರೆಸ್ ಮಾಡಿದ್ದು ಕ್ಷಮಿಸಲು ಯೋಗ್ಯವಲ್ಲ. ಸದನಕ್ಕೆ ಹಾನಿ ಮಾಡುವ ಪ್ರಯತ್ನ ನಡೆದ ರೀತಿ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಯಿತು ಎಂದು ಹೇಳಿದರು.

ಆರು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಿಕೆಯನ್ನು ಜೋಗರಾಮ್ ಸಮರ್ಥಿಸಿಕೊಂಡಿದ್ದು ಸ್ಪೀಕರ್ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದು ಸದನದಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ಅಗತ್ಯವಾಗಿತ್ತು ಎಂದು ಹೇಳಿದರು. ಆದಾಗ್ಯೂ, ಕಾಂಗ್ರೆಸ್ ತನ್ನ ಕೃತ್ಯಗಳಿಗೆ ಕ್ಷಮೆಯಾಚಿಸಿದರೆ, ನಾನು ಅವರೊಂದಿಗೆ ಮಾತನಾಡಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.

ಶುಕ್ರವಾರ ರಾಜಸ್ಥಾನ ವಿಧಾನಸಭೆಯಲ್ಲಿ ಸಚಿವ ಅವಿನಾಶ್ ಗೆಹ್ಲೋಟ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಉಲ್ಲೇಖಿಸಿ "ಅನುಚಿತ" ಪದವನ್ನು ಬಳಸಿದಾಗ ಕೋಲಾಹಲ ಉಂಟಾಯಿತು. ಕಾಂಗ್ರೆಸ್ ಶಾಸಕರ ಘೋಷಣೆಗಳ ನಡುವೆ ಸದನದ ಕಲಾಪವನ್ನು ಮೂರು ಬಾರಿ ಮುಂದೂಡಬೇಕಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT