ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿ TNIE
ದೇಶ

ಇಂದಿರಾ ಗಾಂಧಿ 'ಅಜ್ಜಿ' ಹೇಳಿಕೆ: ರಾಜಸ್ಥಾನ ವಿಧಾನಸಭೆಯಿಂದ 6 ಕಾಂಗ್ರೆಸ್ ಶಾಸಕರ ಅಮಾನತು; ಸದನದಲ್ಲಿ ಅಹೋರಾತ್ರಿ ಧರಣಿ!

ಅಮಾನತುಗೊಂಡಿರುವ ಶಾಸಕರಲ್ಲಿ ಗೋವಿಂದ್ ಸಿಂಗ್ ದೋಟಸಾರ, ರಾಮಕೇಶ್ ಮೀನಾ, ಹಕೀಮ್ ಅಲಿ ಖಾನ್, ಅಮೀನ್ ಕಾಗ್ಜಿ, ಜಾಕಿರ್ ಹುಸೇನ್ ಗಸಾವತ್ ಮತ್ತು ಸಂಜಯ್ ಕುಮಾರ್ ಸೇರಿದ್ದಾರೆ. ಈ ಅಮಾನತನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ಸದನದೊಳಗೆ ಧರಣಿ ನಡೆಸಿದ್ದಾರೆ.

ಜೈಪುರ: ರಾಜಸ್ಥಾನ ವಿಧಾನಸಭೆಯಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲಗಳ ಮಧ್ಯೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಇಂದಿರಾ ಗಾಂಧಿಯನ್ನು 'ಅಜ್ಜಿ' ಎಂದು ಸಚಿವ ಅವಿನಾಶ್ ಗೆಹ್ಲೋಟ್ ನೀಡಿದ ಹೇಳಿಕೆಯಿಂದ ಉಂಟಾದ ಕೋಲಾಹಲದ ನಂತರ, ಆರು ಕಾಂಗ್ರೆಸ್ ಶಾಸಕರನ್ನು ಸಂಪೂರ್ಣ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಅಮಾನತುಗೊಂಡ ಶಾಸಕರು ಸದನದಲ್ಲಿಯೇ ರಾತ್ರಿ ಕಳೆಯಲು ನಿರ್ಧರಿಸಿದ್ದಾರೆ. ಅವರ ಹಾಸಿಗೆ ಮತ್ತು ಆಹಾರಕ್ಕಾಗಿ ವ್ಯವಸ್ಥೆ ಮಾಡಲಾಗುತ್ತಿದೆ.

ಅಮಾನತುಗೊಂಡಿರುವ ಶಾಸಕರಲ್ಲಿ ಗೋವಿಂದ್ ಸಿಂಗ್ ದೋಟಸಾರ, ರಾಮಕೇಶ್ ಮೀನಾ, ಹಕೀಮ್ ಅಲಿ ಖಾನ್, ಅಮೀನ್ ಕಾಗ್ಜಿ, ಜಾಕಿರ್ ಹುಸೇನ್ ಗಸಾವತ್ ಮತ್ತು ಸಂಜಯ್ ಕುಮಾರ್ ಸೇರಿದ್ದಾರೆ. ಈ ಅಮಾನತನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ಸದನದೊಳಗೆ ಧರಣಿ ನಡೆಸಿದ್ದಾರೆ. ಸರ್ಕಾರ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಮತ್ತು ನಿರಂಕುಶವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು.

ವಿಧಾನಸಭೆಯಲ್ಲಿ ಹೆಚ್ಚುತ್ತಿರುವ ಗದ್ದಲದ ನಡುವೆಯೇ, ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗೋವಿಂದ ಸಿಂಗ್ ದೋಟಸಾರ ಅವರು ಮಾಡಿದ್ದು ಸದನವನ್ನು ದುರ್ಬಲಗೊಳಿಸುವ ಪ್ರಯತ್ನ. ಕಾಂಗ್ರೆಸ್ ಮಾಡಿದ್ದು ಕ್ಷಮಿಸಲು ಯೋಗ್ಯವಲ್ಲ. ಸದನಕ್ಕೆ ಹಾನಿ ಮಾಡುವ ಪ್ರಯತ್ನ ನಡೆದ ರೀತಿ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಯಿತು ಎಂದು ಹೇಳಿದರು.

ಆರು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಿಕೆಯನ್ನು ಜೋಗರಾಮ್ ಸಮರ್ಥಿಸಿಕೊಂಡಿದ್ದು ಸ್ಪೀಕರ್ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದು ಸದನದಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ಅಗತ್ಯವಾಗಿತ್ತು ಎಂದು ಹೇಳಿದರು. ಆದಾಗ್ಯೂ, ಕಾಂಗ್ರೆಸ್ ತನ್ನ ಕೃತ್ಯಗಳಿಗೆ ಕ್ಷಮೆಯಾಚಿಸಿದರೆ, ನಾನು ಅವರೊಂದಿಗೆ ಮಾತನಾಡಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.

ಶುಕ್ರವಾರ ರಾಜಸ್ಥಾನ ವಿಧಾನಸಭೆಯಲ್ಲಿ ಸಚಿವ ಅವಿನಾಶ್ ಗೆಹ್ಲೋಟ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಉಲ್ಲೇಖಿಸಿ "ಅನುಚಿತ" ಪದವನ್ನು ಬಳಸಿದಾಗ ಕೋಲಾಹಲ ಉಂಟಾಯಿತು. ಕಾಂಗ್ರೆಸ್ ಶಾಸಕರ ಘೋಷಣೆಗಳ ನಡುವೆ ಸದನದ ಕಲಾಪವನ್ನು ಮೂರು ಬಾರಿ ಮುಂದೂಡಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT