ದೆಹಲಿ ರೈಲು ನಿಲ್ದಾಣದಲ್ಲಿ ಜನ 
ದೇಶ

ದೆಹಲಿ ಕಾಲ್ತುಳಿತ; ಘಟನೆಯ ವಿಡಿಯೋಗಳನ್ನು ತೆಗೆದುಹಾಕುವಂತೆ X ಗೆ ರೈಲ್ವೆ ಸಚಿವಾಲಯ ಸೂಚನೆ

ಅಧಿಕೃತ ಅಂಕಿಅಂಶಗಳ ಪ್ರಕಾರ, ದೆಹಲಿ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ನಾಲ್ಕು ಪುರುಷರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದರು. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ನವದೆಹಲಿ: ಫೆಬ್ರುವರಿ 15 ರಂದು ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳಿರುವ 285 ಸೋಶಿಯಲ್ ಮೀಡಿಯಾ ಲಿಂಕ್‌ಗಳನ್ನು ತೆಗೆದುಹಾಕುವಂತೆ ರೈಲ್ವೆ ಸಚಿವಾಲಯ 'X'ಗೆ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(3)(ಬಿ) ಅಡಿಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಟೇಕ್‌ಡೌನ್ ಸೂಚನೆಗಳನ್ನು ನೀಡಲು ರೈಲ್ವೆ ಸಚಿವಾಲಯ ಅದರ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ (ರೈಲ್ವೆ ಮಂಡಳಿ) ಡಿಸೆಂಬರ್ 24 ರಂದು ಅಧಿಕಾರ ನೀಡಿದೆ. ಈ ಹಿಂದೆ ಐಟಿ ಸಚಿವಾಲಯದ ಸೆಕ್ಷನ್ 69ಎ ನಿರ್ಬಂಧಕ ಸಮಿತಿಯ ಮೂಲಕ ಇಂತಹ ಮನವಿಗಳನ್ನು ಮಾಡಲಾಗುತ್ತಿತ್ತು.

'ಮೃತ ವ್ಯಕ್ತಿಗಳನ್ನು ಚಿತ್ರಿಸುವಂತಹ' ವಿಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಅನೇಕ ಖಾತೆಗಳಿಂದ ಟ್ವೀಟ್‌ಗಳನ್ನು ತೆಗೆದುಹಾಕಲು ಸಚಿವಾಲಯವು ಸಾಮಾಜಿಕ ಮಾಧ್ಯಮಕ್ಕೆ 36 ಗಂಟೆಗಳ ಕಾಲಾವಕಾಶ ನೀಡಿದೆ' ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ದೆಹಲಿ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ನಾಲ್ಕು ಪುರುಷರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದರು. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಂದಾಜಿನ ಪ್ರಕಾರ, ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳಲೆಂದು 50,000ಕ್ಕೂ ಹೆಚ್ಚು ಜನರು ನವದೆಹಲಿ ರೈಲು ನಿಲ್ದಾಣವನ್ನು ತಲುಪಿದ್ದರು.

ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಯಲು ಸುರಕ್ಷತಾ ಕ್ರಮಗಳನ್ನು ತಕ್ಷಣವೇ ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ, ಭಾರತೀಯ ರೈಲ್ವೆ ಮತ್ತು ರೈಲ್ವೆ ಮಂಡಳಿಗೆ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT