ಮಹಾಕುಂಭ ಮೇಳದಲ್ಲಿ ಭಕ್ತರಿಂದ ಸಂಗಮದಲ್ಲಿ ಪವಿತ್ರ ಸ್ನಾನ 
ದೇಶ

ಮಹಾಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಯುಪಿ ಸರ್ಕಾರ

ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ.

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.

ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್​ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಬೇಕು ಎಂಬುದು ಬಹುತೇಕರ ಆಶಯ.

ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಮತ್ತು ಫೆಬ್ರವರಿ 26 ರಂದು ನಡೆಯುವ ಅಂತಿಮ 'ಅಮೃತ ಸ್ನಾನ'ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಮಹಾ ಕುಂಭವು ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನರ ಭಾಗವಹಿಸುವಿಕೆಯನ್ನು ದಾಖಲಿಸಿದೆ ಎಂದು ಉತ್ತರ ಪ್ರದೇಶ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!

ತಾಪಮಾನದಲ್ಲಿ ಮತ್ತಷ್ಟು ಕುಸಿತ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ, ವಾಯು ಗುಣಮಟ್ಟದಲ್ಲೂ ಬದಲಾವಣೆ

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

SCROLL FOR NEXT