ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಜೆಪಿ ನಡ್ಡಾ 
ದೇಶ

ಮಹಾಕುಂಭ ಮೇಳ 2025: ಮುಕ್ತಾಯಕ್ಕೆ ಇನ್ನೂ ನಾಲ್ಕು ದಿನ ಬಾಕಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್!

ಇಂದು ಅರೈಲ್‌ನಲ್ಲಿರುವ ತ್ರಿವೇಣಿ ಅತಿಥಿ ಗೃಹಕ್ಕೆ ಆಗಮಿಸಿದ ಜೆ. ಪಿ. ನಡ್ಡಾ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ತದನಂತರ ಮಧ್ಯಾಹ್ನ 3 ಗಂಟೆಗೆ ಉಭಯ ನಾಯಕರು ಗಂಗಾ ನದಿಗೆ ಅರ್ಘ್ಯ ಸಲ್ಲಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಮುಕ್ತಾಯಕ್ಕೆ ಕೇವಲ ಇನ್ನೂ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದ್ದು, 41 ನೇ ದಿನವಾದ ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಇಂದು ಅರೈಲ್‌ನಲ್ಲಿರುವ ತ್ರಿವೇಣಿ ಅತಿಥಿ ಗೃಹಕ್ಕೆ ಆಗಮಿಸಿದ ಜೆ. ಪಿ. ನಡ್ಡಾ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ತದನಂತರ ಮಧ್ಯಾಹ್ನ 3 ಗಂಟೆಗೆ ಉಭಯ ನಾಯಕರು ಗಂಗಾ ನದಿಗೆ ಅರ್ಘ್ಯ ಸಲ್ಲಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಬಡೇ ಹನುಮಾನ್ ದೇವಾಲಯ ಮತ್ತು ಅಕ್ಷಯವತ್‌ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶನಿವಾರ ಬೆಳಗ್ಗೆ 8ಗಂಟೆಯವರೆಗೂ ಸುಮಾರು 33. 10 ಲಕ್ಷ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಲ್ಲಿಯವರೆಗೂ ಸುಮಾರು 59. 64 ಕೋಟಿ ಯಾತ್ರಾರ್ಥಿಗಳು ಪುಣ್ಯ ಸ್ನಾನ ಮಾಡುವ ಮೂಲಕ ಇತಿಹಾಸದಲ್ಲಿ ಹೊಸ ದಾಖಲೆ ಮಾಡಲಾಗಿದೆ.

ಜನದಟ್ಟಣೆ ಸವಾಲಿನ ನಡುವೆಯೂ ಭಕ್ತರಿಗೆ ತೊಂದರೆಯಾಗದಂತೆ ಉತ್ತರ ಪ್ರದೇಶ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಕೆಲವೊಂದು ತೊಂದರೆಗಳ ಹೊರತಾಗಿಯೂ ಮಹಾ ಕುಂಭ ಮೇಳ ಯಶಸ್ವಿಯಾಗಿ ನಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಯತ್ನವನ್ನು ಜನರು ಶ್ಲಾಘಿಸಿದ್ದಾರೆ. ಇದೇ 26 ರಂದು ಮಹಾಶಿವರಾತ್ರಿ ದಿನದಂದು ಕುಂಭ ಮೇಳ ಮುಕ್ತಾಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT