ರೈಲು ನಿಲ್ದಾಣದ ನಾಮಫಲಕಕ್ಕೆ ಮಸಿ ಬಳಿಯುತ್ತಿರುವ ಕಾರ್ಯಕರ್ತರು 
ದೇಶ

ತಮಿಳುನಾಡಿನಲ್ಲಿ ಭಾಷಾ ವಿವಾದ: ರೈಲು ನಿಲ್ದಾಣದಲ್ಲಿ ಹಿಂದಿ ನಾಮಫಲಕಕ್ಕೆ ಮಸಿ

ಪೊಲ್ಲಾಚಿ ಜಂಕ್ಷನ್ ಎಂದು ಹಿಂದಿಯಲ್ಲಿ ಬರೆದಿರುವ ಅಕ್ಷರಗಳಿಗೆ ತಮಿಳು ಪರ ಹೋರಾಟಗಾರರು ಕಪ್ಪು ಮಸಿ ಬಳಿಯುತ್ತಿರುವುದನ್ನು ಕಾಣಬಹುದಾಗಿದೆ.

ಚೆನ್ನೈ: ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆಡಳಿತಾರೂಢ ಡಿಎಂಕೆ ಆರೋಪಿಸುತ್ತಿರುವಂತೆಯೇ ತಮಿಳು ಪರ ಕಾರ್ಯಕರ್ತರು ಭಾನುವಾರ ಪೊಲ್ಲಾಚಿ ರೈಲು ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಅಕ್ಷರಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲ್ಲಾಚಿ ಜಂಕ್ಷನ್ ಎಂದು ಹಿಂದಿಯಲ್ಲಿ ಬರೆದಿರುವ ಅಕ್ಷರಗಳಿಗೆ ತಮಿಳು ಪರ ಹೋರಾಟಗಾರರು ಕಪ್ಪು ಮಸಿ ಬಳಿಯುತ್ತಿರುವುದನ್ನು ಕಾಣಬಹುದಾಗಿದೆ.

ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ಪಡೆದ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಅದನ್ನು ಸರಿಪಡಿಸಿದ್ದಾರೆ.

ಈ ಸಂಬಂಧ ಪೊಲ್ಲಾಚಿಯ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ರೈಲ್ವೆ ಕಾಯ್ದೆಯಡಿ ದೂರು ದಾಖಲಿಸಿದ್ದು, ತಪಿತಸ್ಥರನ್ನು ಗುರುತಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ರೈಲ್ವೆ ಪಾಲ್ಘಾಟ್ ವಿಭಾಗ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ 2020) ಮೂಲಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT