ವ್ಯಾಲೆಂಟೈನ್‌‌ 
ದೇಶ

ತಿರುವನಂತಪುರ: ಕುಡಿದ ಅಮಲಿನಲ್ಲಿ ಬಿಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದ ಸಹಪಾಠಿ

ನಗರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಿರುವನಂತಪುರಂ: ನಗರೂರಿನ ರಾಜಧಾನಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ (ಆರ್‌ಐಇಟಿ)ಯಲ್ಲಿ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ಮಿಜೋರಾಂನ 22 ವರ್ಷದ ಯುವಕನೊಬ್ಬನನ್ನು ಶನಿವಾರ ರಾತ್ರಿ ಕಾಲೇಜು ಆವರಣದ ಬಳಿ ಇರಿದು ಹತ್ಯೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಕಾಲೇಜಿನಿಂದ ಸುಮಾರು 200 ಮೀಟರ್ ದೂರದಲ್ಲಿರುವ ನೆಡುಂಪರಂಬು ಜಂಕ್ಷನ್‌ನಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ವಿದ್ಯಾರ್ಥಿ ಮೇಲೆ ದಾಳಿ ನಡೆದಿದೆ. ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಆತನನ್ನು ಕೆಟಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕೆಟಿಸಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮುಂಜಾನೆ ಸಾವಿಗೀಡಾಗಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತನ ರೂಂನಲ್ಲಿ ಜಗಳವಾಡಿದ್ದಾರೆ. ರಾತ್ರಿ 10.40ರ ಸುಮಾರಿಗೆ ನೆಡುಂಪರಂಬು ಜಂಕ್ಷನ್‌ಗೆ ಲೋಮಾ ಎಂಬಾತ ವ್ಯಾಲೆಂಟೈನ್‌‌ನನ್ನು ಕರೆಸಿದ್ದಾನೆ. ಆಗ ಜಗಳ ವಿಕೋಪಕ್ಕೆ ತಿರುಗಿದೆ. ಆಗ ಲೋಮಾ ಏಕಾಏಕಿ ವ್ಯಾಲೆಂಟೈನ್‌ನ ಎದೆಗೆ ಚಾಕುವಿನಿಂದ ಇರಿದಿದ್ದಾನೆ.

ಈ ಹಿಂದೆಯೂ ಇಬ್ಬರ ನಡುವೆ ಜನಗಳು ನಡೆದಿದ್ದು, ಚಾಕು ಇರಿತಕ್ಕೂ ಮುನ್ನ ಪರಸ್ಪರ ಸವಾಲು ಹಾಕಿಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳದಲ್ಲಿಯೇ ಆರೋಪಿಯನ್ನು ಬಂಧಿಸಲಾಗಿದೆ.

ನಗರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಮೂಲಭೂತವಾದಿಗಳ ಒತ್ತಡಕ್ಕೆ ಮಣಿದ ಪಾಕ್ ಸರ್ಕಾರ; ಹಿಂದೂ ಹೆಸರುಗಳ ಮರು ನಾಮಕರಣ ಮುಂದೂಡಿಕೆ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

SCROLL FOR NEXT