ಆರೋಪಿ ಅಫಾನ್ 
ದೇಶ

ಕೇರಳ: ಗೆಳತಿ ಸೇರಿ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸರ ಮುಂದೆ ಯುವಕ ಶರಣು!

ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ.

ತಿರುವನಂತಪುರ: ಕೇರಳದ ತಿರುವನಂತಪುರದ ವೆಂಜರಮೂಡು ಎಂಬಲ್ಲಿ 23 ವರ್ಷದ ಯುವಕನೊಬ್ಬ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 5 ಮಂದಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಕೊಲೆ ಮಾಡಿದ ಆರೋಪಿಯನ್ನು ಅಫಾನ್ (23) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಬಳಿಕ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರು ಹತ್ಯೆಗೈದಿರುವುದಾಗಿ ಹೇಳಿಕೊಂಡಿದ್ದಾನೆ.

ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಬಳಿಕ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರು ಶರಣಾಗಿದ್ದಾನೆ.

ಅಫಾನ್ ಹೇಳಿಕೆಯಿಂದ ಬೆಚ್ಚಿಬಿದ್ದ ಪೊಲೀಸರು ವಿಷ ಸೇವಿಸಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಆತನ ಹೇಳಿಕೆ ಮೇರೆಗೆ ಹಲ್ಲೆ ಹತ್ಯೆ ನಡೆದಿರುವ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಅದರಂತೆ ಆರೋಪಿಯ ಸಹೋದರ ಅಹ್ಸಾನ್, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ ಮತ್ತು ಆತನ ಗೆಳತಿ ಫರ್ಶಾನಾ ಸೇರಿದಂತೆ 5 ಜನರ ಸಾವನ್ನು ಪೊಲೀಸರು ಇದುವರೆಗೆ ಖಚಿತಪಡಿಸಿದ್ದಾರೆ.

ಜೊತೆಗೆ ತಾಯಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುತ್ತಿಗೆ ವಶಪಡಿಸಿಕೊಂಡಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 6ರ ಸಮಯದಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅಫನ್ ಇತ್ತೀಚೆಗಷ್ಟೆ ತನ್ನ ಮನೆಗೆ ತನ್ನ ಗೆಳತಿಯನ್ನು ಕರೆ ತಂದಿದ್ದ. ಆತ ಯುಎಇಯಲ್ಲಿ ತನ್ನ ತಂದೆಯ ಪೀಠೋಪಕರಣ ವ್ಯವಹಾರದಲ್ಲಿ ನೆರವು ನೀಡುತ್ತಿದ್ದ. ಆದರೆ, ಆತನ ತಂದೆ ಹಣಕಾಸು ಬಿಕ್ಕಟ್ಟಿಗೆ ತುತ್ತಾಗಿದ್ದರಿಂದ, ಆತ ಮನೆಗೆ ಮರಳಿದ್ದ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT