ವರ ರವೀಂದ್ರ ಕುಮಾರ್  
ದೇಶ

ವಧುವಿನ ಸ್ನೇಹಿತೆಗೆ ಹಾರ ಹಾಕಿದ ವರ, ಮದುವೆ ಮನೆ ಅಲ್ಲೋಲ ಕಲ್ಲೋಲ, ಕಪಾಳಮೋಕ್ಷ, ವಿವಾಹ ರದ್ದು!

ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಮದುವೆಯೊಂದರಲ್ಲಿ ಮದುವೆ ಗಂಡು ಕುಡಿದು ಬಂದು ಕೋಲಾಹಲ ಸೃಷ್ಟಿಸಿದ್ದು, ವಧುವಿಗೆ ಹಾಕಬೇಕಿದ್ದ ಹಾರವನ್ನು ಆಕೆಯ ಆತ್ಮೀಯ ಗೆಳತಿಗೆ ಹಾಕಿ ಎಡವಟ್ಟು ಮಾಡಿದ್ದಾನೆ. ಈ ಘಟನೆ ಇದೀಗ ಭೀಕರ ತಿರುವು ಪಡೆದುಕೊಂಡಿದ್ದು, ಇಡೀ ಮದುವೆ ಮಂಟಪ ರಣರಂಗವಾಯಿತು.

ಬರೇಲಿ: ಮದುವೆ ಗಂಡು ಮಾಡಿದ ಎಡವಟ್ಟೊಂದು ಮದುವೆ ಮನೆಯಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದ್ದು, ಇಡೀ ಮದುವೆ ಮಂಟಪವೇ ರಣಾಂಗಣವಾದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಹೌದು.. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಮದುವೆಯೊಂದರಲ್ಲಿ ಮದುವೆ ಗಂಡು ಕುಡಿದು ಬಂದು ಕೋಲಾಹಲ ಸೃಷ್ಟಿಸಿದ್ದು, ವಧುವಿಗೆ ಹಾಕಬೇಕಿದ್ದ ಹಾರವನ್ನು ಆಕೆಯ ಆತ್ಮೀಯ ಗೆಳತಿಗೆ ಹಾಕಿ ಎಡವಟ್ಟು ಮಾಡಿದ್ದಾನೆ. ಈ ಘಟನೆ ಇದೀಗ ಭೀಕರ ತಿರುವು ಪಡೆದುಕೊಂಡಿದ್ದು, ಇಡೀ ಮದುವೆ ಮಂಟಪ ರಣರಂಗವಾಯಿತು.

26 ವರ್ಷದ ವರ ರವೀಂದ್ರ ಕುಮಾರ್ ಮತ್ತು 21 ವರ್ಷದ ವಧು ರಾಧಾ ದೇವಿಗೆ ವಿವಾಹ ನಿಶ್ಚಯವಾಗಿತ್ತು. ವರ ರವೀಂದ್ರ ಕುಮಾರ್ ತನ್ನ ಮದುವೆ ಮೆರವಣಿಗೆಯೊಂದಿಗೆ ಸ್ಥಳಕ್ಕೆ ತಡವಾಗಿ ಬಂದಿದ್ದ. ಅಲ್ಲದೆ ಸ್ನೇಹಿತರೊಂದಿಗೆ ಸೇರಿ ಕಂಠಪೂರ್ತಿ ಕುಡಿದಿದ್ದ. ಬಳಿಕ ಮದುವೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ವಧುವಿನ ಬದಲು ಆಕೆಯ ಪಕ್ಕದಲ್ಲಿದ್ದ ಆಕೆಯ ಆಪ್ತ ಸ್ನೇಹಿತೆಗೆ ಹೂವಿನ ಹಾರ ಹಾಕಿದ್ದಾನೆ.

ಈ ವೇಳೆ ಮದುವೆಮನೆಯಲ್ಲಿ ಗಲಾಟೆ ಏರ್ಪಟ್ಟಿದ್ದು, ವಧು ವರನಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೇ ಮದುವೆಯನ್ನೇ ರದ್ದು ಮಾಡಿದ್ದಾರೆ. ಅಲ್ಲದೆ ಸಂಬಂಧಿಕರು ಪರಸ್ಪರ ಕಿತ್ತಾಡಿಕೊಂಡಿದ್ದು, ಮಂಟಪದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ವರದಕ್ಷಿಣೆ ಗಲಾಟೆ

ಇನ್ನು ಪೊಲೀಸ್ ತನಿಖೆ ವೇಳೆ ಗಲಾಟೆಗೆ ವರ ಮಾತ್ರನಲ್ಲದೇ ಆತನ ಕುಟುಂಬಸ್ಥರೂ ಕಾರಣ ಎನ್ನಲಾಗಿದೆ. ವರನ ಕಡೆಯವರು ಹೆಚ್ಚುವರಿ ವರದಕ್ಷಿಣೆ ಕೇಳಿದ್ದರು. ಮೊದಲು 2.5ಲಕ್ಷ ಮತ್ತು ವಿವಾಹದ ದಿನ 2 ಲಕ್ಷ ರೂ ನೀಡುವುದಾಗಿ ವಧುವಿನ ಕಡೆಯವರು ಹೇಳಿದ್ದರು. ಆದರೆ ಈ ಹಣ ಸಾಕಾಗುವುದಿಲ್ಲ ಎಂದು ವರನ ಕಡೆಯವು ಗಲಾಟೆ ತೆಗೆದಿದ್ದಾರೆ. ಹೀಗಾಗಿ ವಧು ಮದುವೆ ರದ್ದು ಮಾಡಿ ಪೊಲೀಸ್ ದೂರು ನೀಡಿದ್ದಾರೆ. ಮದುವೆಗೆ ಕುಡಿದು ಬಂದಿದ್ದ ವರ ರವೀಂದ್ರ ಕುಮಾರ್ ವಧುವಿನ ಕುಟುಂಬ ಮತ್ತು ಸಂಬಂಧಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT