ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶ: ಮಹಾಶಿವರಾತ್ರಿಯಂದು ಗೋದಾವರಿ ನದಿಯಲ್ಲಿ ಮುಳುಗಿ ಐವರು ಸಾವು

12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಡಿಪುಡಿ: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ಮಹಾಶಿವರಾತ್ರಿ ದಿನವಾದ ಇಂದು ಬೆಳಗ್ಗೆ ಸ್ನಾನಕ್ಕೆಂದು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಸ್ನಾನ ಮಾಡಲೆಂದು ನದಿ ನೀರಿಗಿಳಿದ 12 ಜನರ ಗುಂಪಿನಲ್ಲಿ ಐವರು ಗೋದಾವರಿ ನದಿಯಲ್ಲಿ ಮುಳುಗಿದ್ದಾರೆ. ಅವರು ಶಿವರಾತ್ರಿ ಹಬ್ಬದ ಸ್ನಾನದ ನಂತರ ಹತ್ತಿರದ ದೇವಸ್ಥಾನಕ್ಕೆ ಹೋಗಲು ಉದ್ದೇಶಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರು ಮತ್ತು ಬದುಕುಳಿದವರಲ್ಲಿ ಹೆಚ್ಚಿನವರು 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಮೃತರ ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT