TNIE
ದೇಶ

ಶತ್ರುಗಳ ನೌಕಾ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ನಡೆಸಿದ DRDO

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯು ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಮೊದಲ ಪ್ರಯೋಗ ನೌಕಾ ಹಡಗು ವಿರೋಧಿ ಕ್ಷಿಪಣಿಯನ್ನು (ಎನ್‌ಎಎಸ್‌ಎಂ-ಎಸ್‌ಆರ್) ಯಶಸ್ವಿಯಾಗಿ ಪರೀಕ್ಷಿಸಿತು.

ಬಾಲಸೋರ್/ನವದೆಹಲಿ: ಶತ್ರುಗಳ ನೌಕಾ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತು ಭಾರತೀಯ ನೌಕಾಪಡೆಯು ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ. ಅಧಿಕಾರಿಗಳು ಬುಧವಾರ ಈ ಮಾಹಿತಿ ನೀಡಿದ್ದಾರೆ.

ಮಂಗಳವಾರ ನಡೆಸಿದ ಪರೀಕ್ಷೆಯಲ್ಲಿ, ಭಾರತೀಯ ನೌಕಾಪಡೆಯ 'ಸೀ ಕಿಂಗ್ ಹೆಲಿಕಾಪ್ಟರ್' ನಿಂದ ಕ್ಷಿಪಣಿಯನ್ನು ಉಡಾಯಿಸಲಾಯಿತು. ಇದು ನಿರ್ದಿಷ್ಠ ಗುರಿಯನ್ನು ಯಶಸ್ವಿಯಾಗಿ ತಲುಪಿದೆ ಎಂದು ಅವರು ಹೇಳಿದರು.

ಕ್ಷಿಪಣಿಯ ಯಶಸ್ವಿ ಪರೀಕ್ಷೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಭಾರತೀಯ ನೌಕಾಪಡೆಯನ್ನು ಅಭಿನಂದಿಸಿದ್ದಾರೆ. ಈ ಪರೀಕ್ಷೆಗಳು ಕ್ಷಿಪಣಿಯ ಸಾಮರ್ಥ್ಯವನ್ನು ಸಾಬೀತುಪಡಿಸಿವೆ. ಅದು 'ಸಮುದ್ರ-ಸ್ಕಿಮ್ಮಿಂಗ್ ಮೋಡ್' ನಲ್ಲಿ ಗರಿಷ್ಠ ವ್ಯಾಪ್ತಿಯಲ್ಲಿ ಸಣ್ಣ ಹಡಗು ಗುರಿಯ ಮೇಲೆ ನೇರವಾಗಿ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ಷಿಪಣಿ ಗುರಿಯನ್ನು ತಲುಪಲು ಸ್ಥಳೀಯ 'ಇಮೇಜಿಂಗ್ ಇನ್ಫ್ರಾ-ರೆಡ್ ಸೀಕರ್' ಅನ್ನು ಬಳಸುತ್ತದೆ.

ಹಾರಾಟದ ಸಮಯದಲ್ಲಿ ಮರು-ಗುರಿ ಮಾಡಲು ಚಿತ್ರಗಳನ್ನು ನೇರವಾಗಿ ಪೈಲಟ್‌ಗೆ ಕಳುಹಿಸುವ ಪರೀಕ್ಷೆಯೂ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!