TNIE
ದೇಶ

ಶತ್ರುಗಳ ನೌಕಾ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ನಡೆಸಿದ DRDO

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯು ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಮೊದಲ ಪ್ರಯೋಗ ನೌಕಾ ಹಡಗು ವಿರೋಧಿ ಕ್ಷಿಪಣಿಯನ್ನು (ಎನ್‌ಎಎಸ್‌ಎಂ-ಎಸ್‌ಆರ್) ಯಶಸ್ವಿಯಾಗಿ ಪರೀಕ್ಷಿಸಿತು.

ಬಾಲಸೋರ್/ನವದೆಹಲಿ: ಶತ್ರುಗಳ ನೌಕಾ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತು ಭಾರತೀಯ ನೌಕಾಪಡೆಯು ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ. ಅಧಿಕಾರಿಗಳು ಬುಧವಾರ ಈ ಮಾಹಿತಿ ನೀಡಿದ್ದಾರೆ.

ಮಂಗಳವಾರ ನಡೆಸಿದ ಪರೀಕ್ಷೆಯಲ್ಲಿ, ಭಾರತೀಯ ನೌಕಾಪಡೆಯ 'ಸೀ ಕಿಂಗ್ ಹೆಲಿಕಾಪ್ಟರ್' ನಿಂದ ಕ್ಷಿಪಣಿಯನ್ನು ಉಡಾಯಿಸಲಾಯಿತು. ಇದು ನಿರ್ದಿಷ್ಠ ಗುರಿಯನ್ನು ಯಶಸ್ವಿಯಾಗಿ ತಲುಪಿದೆ ಎಂದು ಅವರು ಹೇಳಿದರು.

ಕ್ಷಿಪಣಿಯ ಯಶಸ್ವಿ ಪರೀಕ್ಷೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಭಾರತೀಯ ನೌಕಾಪಡೆಯನ್ನು ಅಭಿನಂದಿಸಿದ್ದಾರೆ. ಈ ಪರೀಕ್ಷೆಗಳು ಕ್ಷಿಪಣಿಯ ಸಾಮರ್ಥ್ಯವನ್ನು ಸಾಬೀತುಪಡಿಸಿವೆ. ಅದು 'ಸಮುದ್ರ-ಸ್ಕಿಮ್ಮಿಂಗ್ ಮೋಡ್' ನಲ್ಲಿ ಗರಿಷ್ಠ ವ್ಯಾಪ್ತಿಯಲ್ಲಿ ಸಣ್ಣ ಹಡಗು ಗುರಿಯ ಮೇಲೆ ನೇರವಾಗಿ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ಷಿಪಣಿ ಗುರಿಯನ್ನು ತಲುಪಲು ಸ್ಥಳೀಯ 'ಇಮೇಜಿಂಗ್ ಇನ್ಫ್ರಾ-ರೆಡ್ ಸೀಕರ್' ಅನ್ನು ಬಳಸುತ್ತದೆ.

ಹಾರಾಟದ ಸಮಯದಲ್ಲಿ ಮರು-ಗುರಿ ಮಾಡಲು ಚಿತ್ರಗಳನ್ನು ನೇರವಾಗಿ ಪೈಲಟ್‌ಗೆ ಕಳುಹಿಸುವ ಪರೀಕ್ಷೆಯೂ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT