ರಾಂಚಿ: ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದಾಗ ಲತೇಹಾರ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೆಎಂಎಂ ಸಂಸದೆ ಮಹುವಾ ಮಜಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆಕೆಯ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ಮಜಿ ಅವರ ಹಿರಿಯ ಮಗ, ಸೊಸೆ ಮತ್ತು ಚಾಲಕ ಕೂಡ ಕಾರಿನಲ್ಲಿದ್ದರು. ಮಜಿ ಅವರ ಮೂಗು ಮತ್ತು ಎದೆಗೆ ಗಾಯಗಳಾಗಿವೆ ಮತ್ತು ಅವರ ಹಿರಿಯ ಮಗನಿಗೂ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಹೊಟ್ವಾಗ್ ಗ್ರಾಮದ ಪೆಟ್ರೋಲ್ ಪಂಪ್ ಬಳಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಥಳೀಯ ಜನರು ಮತ್ತು ಪೊಲೀಸರ ಸಹಾಯದಿಂದ ಅವರನ್ನು ಲತೇಹರ್ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೆಸರು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸದರ್ ಪೊಲೀಸ್ ಠಾಣೆ ಪ್ರಭಾರಿ ದುಲಾದ್ ಚೌಧರಿ ಅವರು ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸದರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ನಂತರ, ಅವರನ್ನು ರಾಂಚಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ಆರ್ಕಿಡ್ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಮಜಿ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿ ರಾಂಚಿಗೆ ಹಿಂತಿರುಗುತ್ತಿದ್ದಾಗ, ಅವರ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಲತೇಹರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮಿತ್ ಯಾದವ್ ಹೇಳಿದ್ದಾರೆ.
ವಾಹನ ಚಲಾಯಿಸುವಾಗ ಮಹುವಾ ಮಜಿ ನಿದ್ರೆಗೆ ಜಾರಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.