ತ್ರಿವೇಣಿ ಸಂಗಮದಲ್ಲಿ ಭಕ್ತರ ಪವಿತ್ರ ಸ್ನಾನ 
ದೇಶ

ಮಹಾ ಶಿವರಾತ್ರಿ: ಮಹಾಕುಂಭ ಮೇಳಕ್ಕೆ ಇಂದು ತೆರೆ, 'ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ

ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

ಪ್ರಯಾಗ್ ರಾಜ್: ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿರುವಂತೆಯೇ ಕಳೆದ 45 ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಜಗತ್ತಿನ ದೊಡ್ಡ ಧಾರ್ಮಿಕ ಕಾರ್ಯಕ್ರಮ 'ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದೆ.

ಪೌಶ್ ಪೂರ್ಣಿಮೆಯ ದಿನವಾದ ಇಂದು ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

'ಹರ ಹರ ಮಹಾದೇವ್' ಘೋಷಣೆಗಳ ನಡುವೆ,ಸಂಗಮ ಸ್ಥಳದಲ್ಲಿ ಅಥವಾ ಸಮೀಪವಿರುವ ವಿವಿಧ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದು, ಯಾವುದೇ ಸ್ಥಳದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಮಹಾಕುಂಭದ ಕೊನೆಯ 'ಸ್ನಾನ'ದಲ್ಲಿ ಭಾಗವಹಿಸುವ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಜನವರಿ 13ರಂದು ಪ್ರಾರಂಭವಾದ ಮಹಾಮೇಳ ಇಂದು ಮುಕ್ತಾಯಗೊಳ್ಳಲಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 64 ಕೋಟಿಗೂ ಹೆಚ್ಚು ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಮಹಾಶಿವರಾತ್ರಿಯು ಮಹತ್ವದ ಆಧ್ಯಾತ್ಮಿಕ ಕ್ಷಣವನ್ನು ಗುರುತಿಸುತ್ತಿದ್ದು, ಈ ಸಂಖ್ಯೆ 66 ಕೋಟಿ ಮೀರುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಲ್ಲಿನ ತಮ್ಮ ನಿವಾಸದಲ್ಲಿ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಜಾನೆ 4 ಗಂಟೆಯಿಂದಯಿಂದಲೇ ಪವಿತ್ರ ಸ್ನಾನವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಇಂದು ಮುಂಜಾನೆ 2 ಗಂಟೆಯ ಹೊತ್ತಿಗೆ 11.66 ಲಕ್ಷಕ್ಕೂ ಹೆಚ್ಚು ಭಕ್ತರು ಸಂಗಮದಲ್ಲಿ ಮುಳುಗಿದ್ದಾರೆ. ಈ ಸಂಖ್ಯೆ ಮುಂದಿನ ಎರಡು ಗಂಟೆಗಳಲ್ಲಿ 25.64 ಲಕ್ಷಕ್ಕೆ ಏರಿದ್ದು, ಬೆಳಿಗ್ಗೆ 6 ರ ಹೊತ್ತಿಗೆ ಸುಮಾರು 41.11 ಲಕ್ಷ ಭಕ್ತರು ಸ್ನಾನ ಮಾಡಿದರು.

ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಬಿಂಬಿಸಲಾದ ಮಹಾಕುಂಭ ಮೇಳದ ಕೊನೆಯ ದಿನದಂದು ದೇಶದ ನಾಲ್ಕು ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಆಗಮಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT