ತ್ರಿವೇಣಿ ಸಂಗಮದಲ್ಲಿ ಭಕ್ತರ ಪವಿತ್ರ ಸ್ನಾನ 
ದೇಶ

ಮಹಾ ಶಿವರಾತ್ರಿ: ಮಹಾಕುಂಭ ಮೇಳಕ್ಕೆ ಇಂದು ತೆರೆ, 'ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ

ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

ಪ್ರಯಾಗ್ ರಾಜ್: ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿರುವಂತೆಯೇ ಕಳೆದ 45 ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಜಗತ್ತಿನ ದೊಡ್ಡ ಧಾರ್ಮಿಕ ಕಾರ್ಯಕ್ರಮ 'ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದೆ.

ಪೌಶ್ ಪೂರ್ಣಿಮೆಯ ದಿನವಾದ ಇಂದು ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

'ಹರ ಹರ ಮಹಾದೇವ್' ಘೋಷಣೆಗಳ ನಡುವೆ,ಸಂಗಮ ಸ್ಥಳದಲ್ಲಿ ಅಥವಾ ಸಮೀಪವಿರುವ ವಿವಿಧ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದು, ಯಾವುದೇ ಸ್ಥಳದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಮಹಾಕುಂಭದ ಕೊನೆಯ 'ಸ್ನಾನ'ದಲ್ಲಿ ಭಾಗವಹಿಸುವ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಜನವರಿ 13ರಂದು ಪ್ರಾರಂಭವಾದ ಮಹಾಮೇಳ ಇಂದು ಮುಕ್ತಾಯಗೊಳ್ಳಲಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 64 ಕೋಟಿಗೂ ಹೆಚ್ಚು ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಮಹಾಶಿವರಾತ್ರಿಯು ಮಹತ್ವದ ಆಧ್ಯಾತ್ಮಿಕ ಕ್ಷಣವನ್ನು ಗುರುತಿಸುತ್ತಿದ್ದು, ಈ ಸಂಖ್ಯೆ 66 ಕೋಟಿ ಮೀರುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಲ್ಲಿನ ತಮ್ಮ ನಿವಾಸದಲ್ಲಿ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಜಾನೆ 4 ಗಂಟೆಯಿಂದಯಿಂದಲೇ ಪವಿತ್ರ ಸ್ನಾನವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಇಂದು ಮುಂಜಾನೆ 2 ಗಂಟೆಯ ಹೊತ್ತಿಗೆ 11.66 ಲಕ್ಷಕ್ಕೂ ಹೆಚ್ಚು ಭಕ್ತರು ಸಂಗಮದಲ್ಲಿ ಮುಳುಗಿದ್ದಾರೆ. ಈ ಸಂಖ್ಯೆ ಮುಂದಿನ ಎರಡು ಗಂಟೆಗಳಲ್ಲಿ 25.64 ಲಕ್ಷಕ್ಕೆ ಏರಿದ್ದು, ಬೆಳಿಗ್ಗೆ 6 ರ ಹೊತ್ತಿಗೆ ಸುಮಾರು 41.11 ಲಕ್ಷ ಭಕ್ತರು ಸ್ನಾನ ಮಾಡಿದರು.

ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಬಿಂಬಿಸಲಾದ ಮಹಾಕುಂಭ ಮೇಳದ ಕೊನೆಯ ದಿನದಂದು ದೇಶದ ನಾಲ್ಕು ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಆಗಮಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT