ಮಹಾಕುಂಭ ಮೇಳದ ಚಿತ್ರ 
ದೇಶ

ಮಹಾಕುಂಭ 2025 ಯಶಸ್ಸು: 45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ

ಕಳೆದ 45 ಪವಿತ್ರ ದಿನಗಳಲ್ಲಿ ಸಾಧು, ಸಂತರು ಸೇರಿದಂತೆ 66 ಕೋಟಿಗೂ ಅಧಿಕ ಭಕ್ತರು ಪವಿತ್ರ ತ್ರಿವೇಣಿಯಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಪ್ರಯಾಗ್ ರಾಜ್: ಮಹಾಕುಂಭ 2025 ರ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಳೆದ 45 ಪವಿತ್ರ ದಿನಗಳಲ್ಲಿ 66 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಪ್ರಧಾನಮಂತ್ರಿಗಳೇ, ನಿಮ್ಮ ಯಶಸ್ವಿ ಮಾರ್ಗದರ್ಶನದ ಫಲವಾಗಿ ಭಕ್ತಿ ವೈಭವ್ಯ, ಭದ್ರತೆ, ಶುಚಿತ್ವ ಮತ್ತು ಉತ್ತಮ ಭದ್ರತೆ ನಿರ್ವಹಣೆಯ ಹೊಸ ಮಾನದಂಡಗಳ ಮೂಲಕ ‘ಏಕತೆ, ಸಮಾನತೆ, ಸಾಮರಸ್ಯದ ಮಹಾ ಯಾಗ’ ಮಹಾ ಕುಂಭ-2025 ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ.

ಕಳೆದ 45 ಪವಿತ್ರ ದಿನಗಳಲ್ಲಿ ಸಾಧು, ಸಂತರು ಸೇರಿದಂತೆ 66 ಕೋಟಿಗೂ ಅಧಿಕ ಭಕ್ತರು ಪವಿತ್ರ ತ್ರಿವೇಣಿಯಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಎಲ್ಲರೂ ಒಂದೇ’ಎಂಬ ಪವಿತ್ರ ಸಂದೇಶವನ್ನು ಇಡೀ ಜಗತ್ತಿಗೆ ಸಾರುವ ಈ ಮಾನವೀಯತೆಯ ಹಬ್ಬವು ‘ವಸುಧೈವ ಕುಟುಂಬಕಂ’ ಎಂಬ ಪವಿತ್ರ ಭಾವನೆಯೊಂದಿಗೆ ಇಡೀ ಜಗತ್ತನ್ನು ಒಂದುಗೂಡಿಸಿದೆ.

ನಿಮ್ಮ ಮಾರ್ಗದರ್ಶನ ಮತ್ತು ಶುಭ ಹಾರೈಕೆಗಳು ನಮಗೆಲ್ಲರಿಗೂ ಸದಾ ಹೊಸ ಚೈತನ್ಯವನ್ನು ನೀಡುತ್ತಿರಲಿ ಎಂದು ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ಪ್ರಯಾಗ್ ರಾಜ್ ನಲ್ಲಿ 45 ದಿನಗಳಿಂದ ನಡೆದ ಮಹಾ ಕುಂಭ ಮೇಳ ಏಕತೆಯ ಮಹಾಯಜ್ಞ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರ್ಣಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT