ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ online desk
ದೇಶ

ಸಮಸ್ಯೆ ಪರಿಹಾರಕ್ಕೆ ಅಥವಾ ಅಗತ್ಯ ಬಿದ್ದಾಗ ಮಾತ್ರ ಜನ MNS ಬಗ್ಗೆ ಯೋಚಿಸುತ್ತಾರೆ, ಚುನಾವಣೆಯಲ್ಲಿ ಮರೆಯುತ್ತಾರೆ: ರಾಜ್ ಠಾಕ್ರೆ

ನೂತನ ವರ್ಷದ ಹಿನ್ನೆಲೆಯಲ್ಲಿ ಟ್ವಿಟರ್ ಸಂದೇಶ ನೀಡಿರುವ ಠಾಕ್ರೆ, ಪಕ್ಷದ ಕಾರ್ಯಕರ್ತರಿಗೆ ಚುನಾವಣಾ ಫಲಿತಾಂಶಗಳನ್ನು ಹಿಂದೆ ಇರಿಸಿ, ಮುಂದುವರಿಯುವಂತೆ ಮನವಿ ಮಾಡಿದರು.

ಮುಂಬೈ: ಯಾವುದೇ ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸಲು, ಅವರಿಗೆ ಬೇಕಾದಾಗ ಮಾತ್ರ ಜನ ತಮ್ಮ ಪಕ್ಷದ ಬಗ್ಗೆ ಯೋಚನೆ ಮಾಡುತ್ತಾರೆ ಚುನಾವಣೆ ಸಂದರ್ಭದಲ್ಲಿ ಮರೆತುಬಿಡುತ್ತಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ನೂತನ ವರ್ಷದ ಹಿನ್ನೆಲೆಯಲ್ಲಿ ಟ್ವಿಟರ್ ಸಂದೇಶ ನೀಡಿರುವ ಠಾಕ್ರೆ, ಪಕ್ಷದ ಕಾರ್ಯಕರ್ತರಿಗೆ ಚುನಾವಣಾ ಫಲಿತಾಂಶಗಳನ್ನು ಹಿಂದೆ ಇರಿಸಿ, ಮುಂದುವರಿಯುವಂತೆ ಮನವಿ ಮಾಡಿದರು, ಶೀಘ್ರದಲ್ಲೇ ಅವರೊಂದಿಗೆ ಮಾತನಾಡುವುದಾಗಿ ಮತ್ತು ಮುಂದಿನ ಕ್ರಮದ ಬಗ್ಗೆ ವಿಶಾಲವಾದ ನಿರ್ದೇಶನವನ್ನು ನೀಡುವುದಾಗಿ ರಾಜ್ ಠಾಕ್ರೆ ಹೇಳಿದ್ದಾರೆ.

"....ಕೆಲವು ವಿಷಯಗಳು ಬದಲಾಗಿಲ್ಲ..... ಜನರು ಪ್ರತಿ ಸಮಸ್ಯೆಯ ಪರಿಹಾರಕ್ಕಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯನ್ನು ನೆನಪಿಸಿಕೊಳ್ಳುತ್ತಾರೆ, ಆದರೆ ಮತದಾನ ಮಾಡುವಾಗ ಅದನ್ನು ನಿರ್ಲಕ್ಷಿಸುತ್ತಾರೆ" ಎಂದು ಠಾಕ್ರೆ ಹೇಳಿದರು.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ 288 ವಿಧಾನಸಭಾ ಸ್ಥಾನಗಳ ಪೈಕಿ 125 ರಲ್ಲಿ ಎಂಎನ್‌ಎಸ್ ಸ್ಪರ್ಧಿಸಿತ್ತು ಆದರೆ ಯಾವುದೇ ಸ್ಥಾನ ಗಳಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ರಾಜ್ ಪುತ್ರ ಅಮಿತ್ ಠಾಕ್ರೆ ಕೂಡ ಮುಂಬೈನಲ್ಲಿ ಮಾಹಿಮ್‌ನಿಂದ ಸೋತಿದ್ದರು.

ಚುನಾವಣಾ ಫಲಿತಾಂಶದ ಕೆಲವೇ ವಾರಗಳಲ್ಲಿ, ರಾಜ್ಯದಲ್ಲಿ ಮರಾಠಿ ಭಾಷಿಕರ ವಿರುದ್ಧ "ದಬ್ಬಾಳಿಕೆ" ಪ್ರಾರಂಭವಾಗಿದೆ ಎಂದು ಠಾಕ್ರೆ ಹೇಳಿದ್ದಾರೆ. ಈ ಪ್ರಕರಣಗಳಲ್ಲಿ MNS ಕ್ರಮ ತೆಗೆದುಕೊಳ್ಳುತ್ತದೆ ಎಂದು ಜನರು ನಿರೀಕ್ಷಿಸಿದ್ದರು, ನಿರೀಕ್ಷೆಯಂತೆ ಎಂಎನ್ಎಸ್ ಮಾಡಿದೆ ಎಂದು ಅವರು ಹೇಳಿದರು.

"ಮರಾಠಿ ಮಾನೂಸ್" (ಸ್ಥಳೀಯ ಮಹಾರಾಷ್ಟ್ರ) ನ್ನು ಕೇವಲ ಮತಕ್ಕಾಗಿ ಬಳಸಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಎಂಎನ್‌ಎಸ್ ಮುಖ್ಯಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT