ಜೈರಾಮ್ ರಮೇಶ್  
ದೇಶ

ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಿರುವುದಕ್ಕೆ ಮೋದಿ ಸರ್ಕಾರ ಕಾರಣ: ಕಾಂಗ್ರೆಸ್

ಮಾರ್ಚ್ ಮತ್ತು ಜೂನ್ 2024 ರ ನಡುವಿನ ಮೂರು ತಿಂಗಳ ಅವಧಿಯಲ್ಲಿ ಚಿನ್ನದ ಸಾಲದ ಪಡೆದು ಮರುಪಾವತಿಸದೆ ಇರುವುದು ರೂ.5,149 ಕೋಟಿಗಳಿಂದ ರೂ.6,696 ಕೋಟಿಗೆ ಅಂದರೆ ಶೇ 30 ರಷ್ಟು ಏರಿಕೆಯಾಗಿದೆ.

ನವದೆಹಲಿ: ಕ್ರೋನಿಸಂ( ಆಪ್ತರಿಗೆ ಮಣೆ) ಅನಿಯಮಿತ ನೀತಿಗಳು ಮತ್ತು ಪಕ್ಷಪಾತದ ಆದ್ಯತೆಗಳಿಂದ ದೇಶದಲ್ಲಿ ಚಿನ್ನದ ಸಾಲ ಪಡೆದು ಮರು ಪಾವತಿಸದವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ

ಮೋದಿ ಸರ್ಕಾರ ಮಹಿಳೆಯರಿಂದ ಮಂಗಳಸೂತ್ರ ಕಸಿಯಲು ಪ್ರಮುಖ ಕಾರಣವಾಗಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಶೇ. 30 ರಷ್ಟು ಜನರು ಚಿನ್ನದ ಸಾಲ ಮರುಪಾವತಿದೆ ಮಂಗಳ ಸೂತ್ರ ಸೇರಿದಂತೆ ತಮ್ಮ ಚಿನ್ನಾಭರಣ ಕಳೆದುಕೊಳ್ಳುತ್ತಿರುವುದಾಗಿ ಮಹಿಳೆಯರು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ಸರ್ಕಾರದ ಕ್ರೋನಿಸಂ ಮತ್ತಿತರ ಕಾರಣಗಳಿಂದ ಸ್ವತಂತ್ರ ಭಾರತದ ಇತಿಹಾಸದಲ್ಲಿ ಮಹಿಳೆಯರಿಂದ ಮಂಗಳಸೂತ್ರಗಳನ್ನು ಕಸಿಯುವ ಏಕೈಕ ಸರ್ಕಾರ ಎಂಬ ಹೆಸರು ಗಳಿಸಿದೆ ಎಂದು ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಮಂಗಳಸೂತ್ರ’ ಕಸಿಯುವ ಕೆಲವು ಕಲ್ಪಿತ ಸಂಚಿನ ಬಗ್ಗೆ 'ಅಜೈವಿಕ ಪ್ರಧಾನಿ' ಹೆದರುತ್ತಿದ್ದ ಸಮಯದಲ್ಲಿ, ನಾವು ಅವರ ಅಧಿಕಾರಾವಧಿಯಲ್ಲಿ ಚಿನ್ನದ ಸಾಲಗಳ ತ್ವರಿತ ಏರಿಕೆಯ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಭಾರತೀಯ ಕುಟುಂಬಗಳಿಂದ ಅಂದಾಜು ರೂ. 3 ಲಕ್ಷ ಕೋಟಿಯಷ್ಟು ಚಿನ್ನದ ಸಾಲಗಳನ್ನು ತೆಗೆದುಕೊಳ್ಳಲಾಗಿದ್ದು, ಇಂದಿನವರೆಗೆ ಇದು ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಹೆಚ್ಚುತ್ತಿರುವ ಋಣಭಾರ ಮತ್ತು ನಿಧಾನಗತಿಯ ಆರ್ಥಿಕತೆಯೊಂದಿಗೆ ಚಿನ್ನದ ಸಾಲ ಪಡೆದು ಮರುಪಾವತಿಸದರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

"ಮಾರ್ಚ್ ಮತ್ತು ಜೂನ್ 2024 ರ ನಡುವಿನ ಮೂರು ತಿಂಗಳ ಅವಧಿಯಲ್ಲಿ ಚಿನ್ನದ ಸಾಲದ ಪಡೆದು ಮರುಪಾವತಿಸದೆ ಇರುವುದು ರೂ.5,149 ಕೋಟಿಗಳಿಂದ ರೂ.6,696 ಕೋಟಿಗೆ ಅಂದರೆ ಶೇ 30 ರಷ್ಟು ಏರಿಕೆಯಾಗಿದೆ. ಈ ಸಾಲ ಮರುಪಾವತಿಸದೆ ಇರುವವರು ಹೆಚ್ಚಾಗಿ ಚಿನ್ನಾಭರಣಗಳನ್ನು ಕಳೆದುಕೊಳ್ಳುತ್ತಾರೆ. ಮಹಿಳೆಯರು ಮಂಗಳಸೂತ್ರ ಮತ್ತಿತರ ಆಭರಣಗಳನ್ನು ಕಳೆದುಕೊಳ್ಳುತ್ತಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ನವ ಮಂಗಳೂರು ಬಂದರಿಗೆ ಆಗಮಿಸಿದ ಎರಡು ತೈಲ ಹಡಗುಗಳು!

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

ಐಪಿಎಲ್ 2026: 5 ಎಸೆತದಲ್ಲಿ 5 ಸಿಕ್ಸರ್.. ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

SCROLL FOR NEXT