ನಟ ಅಲ್ಲು ಅರ್ಜುನ್ 
ದೇಶ

Sandhya Theatre stampede case: ಕೊನೆಗೂ Allu Arjun ಗೆ ಬಿಗ್ ರಿಲೀಫ್, ಜಾಮೀನು ಮಂಜೂರು!

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹೈದರಾಬಾದ್: ಹೈದರಾಬಾದ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಕೋರ್ಟ್ ನಿಂದ ರೆಗ್ಯುಲರ್ ಜಾಮೀನು ಮಂಜೂರಾಗಿದೆ.

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ ಗೆ ಇದೀಗ ಹೈದರಾಬಾದ್‌ನ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ.

ವಾದ–ಪ್ರತಿವಾದಗಳನ್ನು ಆಲಿಸಿದ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯದ ನ್ಯಾಯಾದೀಶರು ನಟ ಅಲ್ಲು ಅರ್ಜುನ್ ಗೆ ಷರತ್ತು ಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

50,000 ರೂ ಬಾಂಡ್‌ನ ತಲಾ ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು ಮತ್ತು ಅಲ್ಲು ಅರ್ಜುನ್ ಅವರು ಇದೇ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಜಡ್ಜ್ ಆದೇಶಿಸಿದ್ದಾರೆ. ಈ ಮೂಲಕ ನಟ ಅಲ್ಲು ಅರ್ಜುನ್ ಸಧ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್‌ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಮತ್ತು ಅವರ ಕುಟುಂಬ ಸಂಧ್ಯಾ ಥಿಯೇಟರ್ ಗೆ ಆಗಮಿಸಿತ್ತು. ನಟನನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು.

ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್‌ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಲ್ಲು ಅರ್ಜುನ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ತೆಲಂಗಾಣ ಪೊಲೀಸರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

SCROLL FOR NEXT