ನಟ ಅಲ್ಲು ಅರ್ಜುನ್ 
ದೇಶ

Sandhya Theatre stampede case: ಕೊನೆಗೂ Allu Arjun ಗೆ ಬಿಗ್ ರಿಲೀಫ್, ಜಾಮೀನು ಮಂಜೂರು!

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹೈದರಾಬಾದ್: ಹೈದರಾಬಾದ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಕೋರ್ಟ್ ನಿಂದ ರೆಗ್ಯುಲರ್ ಜಾಮೀನು ಮಂಜೂರಾಗಿದೆ.

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ ಗೆ ಇದೀಗ ಹೈದರಾಬಾದ್‌ನ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ.

ವಾದ–ಪ್ರತಿವಾದಗಳನ್ನು ಆಲಿಸಿದ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯದ ನ್ಯಾಯಾದೀಶರು ನಟ ಅಲ್ಲು ಅರ್ಜುನ್ ಗೆ ಷರತ್ತು ಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

50,000 ರೂ ಬಾಂಡ್‌ನ ತಲಾ ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು ಮತ್ತು ಅಲ್ಲು ಅರ್ಜುನ್ ಅವರು ಇದೇ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಜಡ್ಜ್ ಆದೇಶಿಸಿದ್ದಾರೆ. ಈ ಮೂಲಕ ನಟ ಅಲ್ಲು ಅರ್ಜುನ್ ಸಧ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್‌ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಮತ್ತು ಅವರ ಕುಟುಂಬ ಸಂಧ್ಯಾ ಥಿಯೇಟರ್ ಗೆ ಆಗಮಿಸಿತ್ತು. ನಟನನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು.

ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್‌ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಲ್ಲು ಅರ್ಜುನ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ತೆಲಂಗಾಣ ಪೊಲೀಸರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT