ಮಹಾಕುಂಭ ಮೇಳದಲ್ಲಿ ಕಾಮಾಖ್ಯ ಪೀಠದ ಗಂಗಾಪುರಿ ಮಹಾರಾಜ್ 
ದೇಶ

Maha Kumbh Mela: 32 ವರ್ಷಗಳಿಂದ ಸ್ನಾನ ಮಾಡದ ಸಾಧು; ಮಹಾ ಕುಂಭಮೇಳದ ಪ್ರಮುಖ ಆಕರ್ಷಣೆ!

32 ವರ್ಷಗಳಿಂದ ಈಡೇರದ ಆಸೆ ಇದೆ. ಅದು ಈಡೇರುವ ವರೆಗೂ ನಾನು ಗಂಗೆಯಲ್ಲಿ ಸ್ನಾನ ಮಾಡುವುದಿಲ್ಲ.

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಮಹಾ ಕುಂಭಮೇಳ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮೂಲೆ ಮೂಲೆಯಿಂದ ಇಲ್ಲಿಗೆ ಕೋಟ್ಯಂತರ ಸಾಧು-ಸಂತರು ಆಗಮಿಸುತ್ತಿದ್ದಾರೆ.

ಈ ಪೈಕಿ ಅಸ್ಸಾಂನ ಕಾಮಾಖ್ಯ ಪೀಠದ ಗಂಗಾಪುರಿ ಮಹಾರಾಜ್ ಮಹಾ ಕುಂಭಮೇಳದ ಪ್ರಮುಖ ಆಕರ್ಷಣೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಇವರು 32 ವರ್ಷಗಳಿಂದ ಸ್ನಾನವನ್ನೇ ಮಾಡಿಲ್ಲವಂತೆ.

ಈ ಬಗ್ಗೆ ಮಾತನಾಡಿರುವ ಅವರು ನನಗೆ ಕಳೆದ 32 ವರ್ಷಗಳಿಂದ ಈಡೇರದ ಆಸೆ ಇದೆ. ಅದು ಈಡೇರುವ ವರೆಗೂ ನಾನು ಗಂಗೆಯಲ್ಲಿ ಸ್ನಾನ ಮಾಡುವುದಿಲ್ಲ. ಇದು ಮಿಲನ್ ಮೇಳ. ಆತ್ಮದಿಂದ ಆತ್ಮಕ್ಕೆ ಸಂಪರ್ಕ ಹೊಂದಿರಬೇಕು ಮತ್ತು ಅದಕ್ಕಾಗಿಯೇ ನಾನು ಇಲ್ಲಿದ್ದೇನೆ ಎಂದಿದ್ದಾರೆ.

ಅಂದಹಾಗೆ ಗಂಗಾಪುರಿ ಮಹಾರಾಜರನ್ನು ಛೋಟು ಬಾಬಾ ಎಂದೂ ಕರೆಯುತ್ತಾರೆ. ಈ ಸಾಧು ಮಹಾರಾಜರು ಕುಬ್ಜರಾಗಿದ್ದು, ಅವರಿಗೆ ಈಗ 57 ವರ್ಷ ವಯಸ್ಸು.. ಅವರ ಎತ್ತರ ಕೇವಲ ಮೂರು ಅಡಿ.. ಅವರ ಎತ್ತರದ ಕಾರಣಕ್ಕೇ ಅವರು ಮಹಾ ಕುಂಭಮೇಳದಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದಾರೆ. ನಾನು 3 ಅಡಿ 8 ಇಂಚು. ನನಗೆ 57 ವರ್ಷ. ಇಲ್ಲಿಗೆ ಬರಲು ನನಗೆ ತುಂಬಾ ಸಂತೋಷವಾಗಿದೆ. ನೀವೆಲ್ಲರೂ ಇಲ್ಲಿದ್ದೀರಿ, ನನಗೆ ಅದರಲ್ಲಿ ಸಂತೋಷವಾಗಿದೆ.. ಭಗವಂತ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಹೇಳಿದ್ದಾರೆ.

12 ವರ್ಷಗಳ ನಂತರ ಮಹಾಕುಂಭಮೇಳವನ್ನು ಆಚರಿಸಲಾಗುತ್ತಿದ್ದು, ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆಯಿದೆ. ಇನ್ನು ಮಹಾ ಕುಂಭಮೇಳಕ್ಕೆ ಸಕಲ ಸಿದ್ಧತೆಗಳನ್ನು ನಡೆಸಿರುವ ಸರ್ಕಾರ ಕಾಲ್ತುಳಿತ ಅಪಘಾತಗಳನ್ನು ತಡೆಗಟ್ಟಲು, ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ವಿಶೇಷವಾಗಿ ಜನಸಂದಣಿಯನ್ನು ನಿರ್ವಹಿಸುವುದು ಮತ್ತು ಬೆಂಕಿಯ ಘಟನೆಗಳನ್ನು ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ