ಜನಸಂದಣಿಯೆಡೆಗೆ ನುಗ್ಗಿದ ಕಾರು online desk
ದೇಶ

ಜೈಪುರದಲ್ಲಿ New Orleans ಮಾದರಿಯ ಕೃತ್ಯ: ಧಾರ್ಮಿಕ ಮೆರವಣಿಗೆಯೆಡೆಗೆ ನುಗ್ಗಿದ SUV ಕಾರು!

ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದ ಪ್ರದೇಶಕ್ಕೆ ಎಸ್‌ಯುವಿ ನುಗ್ಗಿ ಬಂದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಿಂದ ಕೋಪಗೊಂಡ ಜನರು ವಾಹನವನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಅಮೇರಿಕಾದ New Orleans ಉಗ್ರ ಕೃತ್ಯದ ಮಾದರಿಯ ಘಟನೆ ನಡೆದಿದೆ.

ಧಾರ್ಮಿಕ ಮೆರವಣಿಗೆ ನಡೆಯುತ್ತಿದ್ದ ಪ್ರದೇಶಕ್ಕೆ ಎಸ್‌ಯುವಿ ನುಗ್ಗಿ ಬಂದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಿಂದ ಕೋಪಗೊಂಡ ಜನರು ವಾಹನವನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಪಾರ್ಕ್ ಪ್ರದೇಶದ ಪಂಚವಟಿ ಸರ್ಕಲ್ ಬಳಿ ಗುರುವಾರ ರಾತ್ರಿ ಸಿಖ್ ಸಮುದಾಯದ ಸದಸ್ಯರು ಕೀರ್ತನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದ್ದು ಅಪ್ರಾಪ್ತ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಕಾರಿನ ವಿಂಡ್‌ಶೀಲ್ಡ್‌ನಲ್ಲಿ ಎಂಎಲ್‌ಎ ಸ್ಟಿಕ್ಕರ್ ಅಂಟಿಸಲಾಗಿದೆ, ಅದನ್ನು ಪರಿಶೀಲಿಸಲಾಗುತ್ತಿದೆ.

ಅತಿ ವೇಗದ ಚಾಲನೆಗಾಗಿ ಆರು ಚಲನ್‌ಗಳನ್ನು ನೀಡಲಾಗಿದೆ. ಅಲ್ಲಿ ನಿಂತಿದ್ದ ಪೊಲೀಸರು ಎಸ್‌ಯುವಿಯನ್ನು ನಿಲ್ಲಿಸುವಂತೆ ಸೂಚಿಸಿದರು ಆದರೆ ಚಾಲಕನು ವೇಗವನ್ನು ಹೆಚ್ಚಿಸಿದ ಎಂದು ಎಸಿಪಿ ಲಕ್ಷ್ಮಿ ಸುತಾರ್ ಹೇಳಿದ್ದಾರೆ. ಜನರಿಗೆ ಡಿಕ್ಕಿ ಹೊಡೆದರೂ ಚಾಲಕ ಕಾರನ್ನು ನಿಲ್ಲಿಸಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜನಸಂದಣಿಯಿಂದ ಸುಮಾರು 100 ಮೀಟರ್ ಹಿಂದೆ ಕಾರನ್ನು ನಿಲ್ಲಿಸಲಾಯಿತು. ನಾಲ್ವರು ಹುಡುಗರು ಇಳಿದು ಓಡಲು ಪ್ರಾರಂಭಿಸಿದರು, ಆದರೆ ಜನರು ಚಾಲಕನನ್ನು ಹಿಡಿದರು. ಕಾರಿನಲ್ಲಿದ್ದ ಇತರ ಮೂವರು ಯುವಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಓರ್ವ ಮಹಿಳೆ ಮತ್ತು ಬಾಲಕಿ ಸೇರಿದ್ದಾರೆ. ಈ ಸಂಬಂಧ ಆದರ್ಶ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT