ಪ್ರಪಾತಕ್ಕೆ ಬಿದ್ದ ಸೇನಾ ವಾಹನ ನಜ್ಜುಗುಜ್ಜಾಗಿರುವ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ರಸ್ತೆಯಲ್ಲಿ ಸ್ಕೀಡ್ ಆಗಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ, ನಾಲ್ವರು ಯೋಧರು ಹುತಾತ್ಮ!

ಉತ್ತರ ಕಾಶ್ಮೀರ ಜಿಲ್ಲೆಯ ಎಸ್ ಕೆ ಪಾಯನ್ ಬಳಿ ಈ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಸ್ಕೀಡ್ ಆಗಿ ಸೇನಾ ವಾಹನಕ್ಕೆ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಅಪಘಾತ ಮುಂದುವರೆದಿದೆ. ಕಳೆದ ವಾರವಷ್ಟೇ ಸೇನಾ ವಾಹನವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಐದು ಮಂದಿ ಯೋಧರು ಹುತಾತ್ಮರಾಗಿದ್ದರು. ಇದೀಗ ಬಂಡಿಪೋರಾ ಜಿಲ್ಲೆಯಲ್ಲಿ ಮತ್ತೆ ಅಂತಹುದೇ ಅಪಘಾತ ಸಂಭವಿಸಿದೆ.

ಸೇನಾ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಎಸ್ ಕೆ ಪಾಯನ್ ಬಳಿ ಈ ಘಟನೆ ನಡೆದಿದೆ.

ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಸ್ಕೀಡ್ ಆಗಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಸೇನೆಯ ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಹಿತಿ ಹಂಚಿಕೊಂಡಿತ್ತು. ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಜನರ ನೆರವಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೂಡಲೇ ಸ್ಪಂದಿಸಿದ ನಾಗರಿಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿತ್ತು.

ಇದಾದ ಕೆಲವು ತಾಸುಗಳ ಬಳಿಕ ಮತ್ತೊಂದು ಫೋಸ್ಟ್ ಮಾಡಿರುವ Army's Chinar Corps, ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮರಾಗಿರುವುದಾಗಿ ತಿಳಿಸಿದೆ.

ಭಾರತೀಯ ಯೋಧರ ಸಾವಿಗೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ಸಂತಾಪ ಸೂಚಿಸಿದ್ದಾರೆ. ಹುತಾತ್ಮ ಯೋಧರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರ ಕೃತಜ್ಞವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT