ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ನಿಗದಿಪಡಿಸಿರುವ ಸ್ಥಳ  
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ಸ್ಥಳ: ಕುಟುಂಬಸ್ಥರ ಒಪ್ಪಿಗೆಗೆ ಕಾಯುತ್ತಿರುವ ಸರ್ಕಾರ

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳ ಭೇಟಿಯ ನಂತರ ಸಿಬ್ಬಂದಿ ಸ್ಥಳಗಳನ್ನು ಸ್ವಚ್ಛಗೊಳಿಸಿ ಅಲ್ಲಿರುವ ಹುಲ್ಲನ್ನು ಕತ್ತರಿಸಿ ತೆಗೆದಿದ್ದಾರೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದೊಳಗೆ ಸುಮಾರು 2,000 ಚದರ ಅಡಿ ಅಳತೆಯ ಅಕ್ಕಪಕ್ಕದ ನಿವೇಶನಗಳಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸಲು ಅವರ ಕುಟುಂಬದಿಂದ ಅನುಮೋದನೆಗಾಗಿ ಕಾಯುತ್ತಿದ್ದಾರೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳ ಭೇಟಿಯ ನಂತರ ಸಿಬ್ಬಂದಿ ಸ್ಥಳಗಳನ್ನು ಸ್ವಚ್ಛಗೊಳಿಸಿ ಅಲ್ಲಿರುವ ಹುಲ್ಲನ್ನು ಕತ್ತರಿಸಿ ತೆಗೆದಿದ್ದಾರೆ. ಸ್ಮಾರಕ ನಿರ್ಮಾಣದ ಅಂದಾಜು ಸಿದ್ಧಪಡಿಸಲಾಗಿದ್ದು ಮನಮೋಹನ್ ಸಿಂಗ್ ಅವರ ಕುಟುಂಬದಿಂದ ಮಾಹಿತಿ ಸಿಕ್ಕಿದ ನಂತರ ಹಂಚಿಕೆ ಔಪಚಾರಿಕತೆಯನ್ನು ಪ್ರಾರಂಭಿಸಲಾಗುತ್ತದೆ.

ಸುಮಾರು 45 ಎಕರೆಗಳಲ್ಲಿ ಹರಡಿರುವ ರಾಷ್ಟ್ರೀಯ ಸ್ಮೃತಿ ಸ್ಥಳ ಸಂಕೀರ್ಣವು ಯಮುನಾ ದಂಡೆಯ ಉದ್ದಕ್ಕೂ ರಿಂಗ್ ರೋಡ್ ಮತ್ತು ಸಲೀಂಘರ್ ಬೈಪಾಸ್ ನಡುವೆ ಇದೆ. ಈ ಎರಡು ತಾಣಗಳು ಪಿ ವಿ ನರಸಿಂಹ ರಾವ್ ಅವರ ಸ್ಮಾರಕದ ಪಕ್ಕದಲ್ಲಿವೆ. ಅವುಗಳು ಸುಸಜ್ಜಿತ ಹಾದಿಗಳಿಂದ ಸುತ್ತುವರಿದಿವೆ. ಮಾಜಿ ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳಾದ ಜೈಲ್ ಸಿಂಗ್, ಶಂಕರ್ ದಯಾಳ್ ಶರ್ಮಾ, ಆರ್ ವೆಂಕಟರಾಮನ್, ಕೆ ಆರ್ ನಾರಾಯಣನ್, ಚಂದ್ರ ಶೇಖರ್ ಮತ್ತು ಐ ಕೆ ಗುಜ್ರಾಲ್ ಅವರ ಸ್ಮಾರಕಗಳಿಂದ ಸುತ್ತುವರಿದಿದೆ. ಈ ಸ್ಥಳದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆ ನಡೆದ ಸದೈವ್ ಅಟಲ್ ಸ್ಮಾರಕ ಉದ್ಯಾನವನವಿದೆ.

ಮನಮೋಹನ್ ಸಿಂಗ್ ಅವರ ಕುಟುಂಬದಿಂದ ಅನುಮೋದನೆ ಪಡೆದ ನಂತರ ಅವರ ಸ್ಮಾರಕ ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾಗುವ ಟ್ರಸ್ಟ್‌ಗೆ ಸರ್ಕಾರ ಭೂಮಿಯನ್ನು ಮಂಜೂರು ಮಾಡಲು ನಿರ್ಧರಿಸಿದೆ ಎಂದು ಹೇಳಿದರು. ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಸ್ಥಾಪಿಸಲಾಗುವ ಟ್ರಸ್ಟ್ ಸ್ಮಾರಕವನ್ನು ನಿರ್ಮಿಸುತ್ತದೆ. ಕುಟುಂಬದ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ. ಹಂಚಿಕೆ ಮಾತುಕತೆಗೆ ಒಂದು ವಾರ ತೆಗೆದುಕೊಳ್ಳಬಹುದು. ಅಟಲ್ ಬಿಹಾರಿ ವಾಜಪೇಯಿ ಪ್ರಕರಣದಲ್ಲಿ ಅವರ ಹೆಸರಿನಲ್ಲಿ ಈಗಾಗಲೇ ಟ್ರಸ್ಟ್ ಅಸ್ತಿತ್ವದಲ್ಲಿತ್ತು. ಮನಮೋಹನ್ ಸಿಂಗ್ ಸ್ಮಾರಕದ ಸ್ಥಳದ ಬಗ್ಗೆ ಕುಟುಂಬಕ್ಕೆ ತಿಳಿಸಲು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರಿಗೆ ಕಾರ್ಯ ವಹಿಸಲಾಗಿತ್ತು.

ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡಿಸೆಂಬರ್ 26 ರಂದು ನಿಧನರಾದರು. ಅವರ ಅಂತ್ಯಕ್ರಿಯೆ ಮೂರು ದಿನಗಳ ನಂತರ ನಿಗಮಬೋಧ ಘಾಟ್‌ನಲ್ಲಿ ನಡೆಯಿತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಮಾರಕಕ್ಕೆ ಜಾಗ ಕೋರಿದ ಬಳಿಕ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಯಿತು. 2013 ರಲ್ಲಿ, ಸ್ಥಳದ ಕೊರತೆಯಿಂದಾಗಿ ರಾಜ್‌ಘಾಟ್ ಬಳಿ ಗಣ್ಯರಿಗೆ ಪ್ರತ್ಯೇಕ ಸ್ಮಾರಕಗಳನ್ನು ನೀಡದಿರಲು ಅಂದಿನ ಸರ್ಕಾರ ನಿರ್ಧರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT