ದರ್ಗಾಕ್ಕೆ ಚಾದರ್ ಹೊದಿಸಿದ ಸಚಿವ ಕಿರಣ್ ರಿಜಿಜು (ಎಡ) ಅಸಾದುದ್ದೀನ್ ಓವೈಸಿ (ಬಲ)ಚಿತ್ರ 
ದೇಶ

ಅಜ್ಮೀರ್ ದರ್ಗಾಕ್ಕೆ 'ಚಾದರ್' ಕಳುಹಿಸಿದ ಮೋದಿ: ಯಾವುದೇ ಪ್ರಯೋಜನವಿಲ್ಲ ಎಂದ ಓವೈಸಿ!

ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು.

ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಕಳುಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಈಗಿರುವ ಮಸೀದಿಗಳು ಅಥವಾ ದರ್ಗಾಗಳ ವಿವಾದ ಕುರಿತು ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸುವುದನ್ನುತಡೆಯಲು ಕ್ರಮ ಕೈಗೊಳ್ಳಬೇಕು ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶುಕ್ರವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಚಾದರ್ ಕಳುಹಿಸಿರುವುದರ ಹಿಂದೆ ಮುಸ್ಲಿಂರ ಬಗ್ಗೆ ಸರ್ಕಾರ ಕಾಳಜಿ ಎಂಬ ಸಂದೇಶ ಇದೆ. ಆದರೆ, ಬಿಜೆಪಿ ಮತ್ತು ಸಂಘಪರಿವಾರದವರು ಕೆಲವು ಮಸೀದಿಗಳ ವಿವಾದದಂತೆ ಖ್ವಾಜಾ ಅಜ್ಮೇರಿ ದರ್ಗಾ, ದರ್ಗಾ ಅಲ್ಲ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕುವುದೇ ಸರ್ಕಾರದ ನಿಜವಾದ ಕೆಲಸ ಎಂದರು.

ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು.

ಈ ಕುರಿತು ಮಾತನಾಡಿದ ಓವೈಸಿ, ಈಗಿರುವ ಮಸೀದಿ, ದರ್ಗಾಗಳು ವಾಸ್ತವಿಕವಾಗಿ ಮಸೀದಿ, ದರ್ಗಾ ಅಲ್ಲ ಎಂದು ಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಗಳಿಗೆ ಸೇರಿದವರು ದೇಶದ ಹಲವು ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಪ್ರಧಾನಿ ಬಯಸಿದರೆ ಈ ಎಲ್ಲ ಕೆಲಸಗಳನ್ನು ನಿಲ್ಲಿಸಬಹುದು ಎಂದು ಹೇಳಿದರು.

ಮಸೀದಿಗಳಿಗೆ ಸಂಬಂಧಿಸಿದ ಇಂತಹ ಏಳಕ್ಕೂ ಹೆಚ್ಚು ವಿವಾದಗಳು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಿಂದ ಬಂದಿವೆ ಎಂದು ಅಸಾದುದ್ದೀನ್ ಓವೈಸಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಚಿವ ಸಂಪುಟ ಪುನಾರಚನೆಗೆ ಸಿದ್ದು ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ

ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: ಸಾವಿನ ಸಂಖ್ಯೆ 30ಕ್ಕೆ ಏರಿಕೆ, ಆತಂಕದ ವಾತಾವರಣ ನಿರ್ಮಾಣ

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?

SCROLL FOR NEXT