ಅರವಿಂದ್ ಕೇಜ್ರಿವಾಲ್ 
ದೇಶ

ಕಾಂಗ್ರೆಸ್ ಪಕ್ಷವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ: ಅರವಿಂದ್ ಕೇಜ್ರಿವಾಲ್

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ, ದೆಹಲಿಯಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿದರು.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೈತ್ರಿಯಿಂದ ದೂರಾಗಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂಜ್ ಕೇಜ್ರಿವಾಲ್ ಕಾಂಗ್ರೆಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ, ದೆಹಲಿಯಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿದರು. ಎಎಪಿ ವಿರುದ್ಧ ಈ ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದನ್ನು ಅವರು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ಹೇಳಿದರು.

'ಜನರು ಕಾಂಗ್ರೆಸ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ' ಎಂದು ಹೇಳಿರುವ ಕೇಜ್ರಿವಾಲ್, ತಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಎಎಪಿ ವಿರುದ್ಧ ಕೈಜೋಡಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, "ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಎಎಪಿಯನ್ನು ಸೋಲಿಸಲು ಒಟ್ಟಾಗಿ ಹೋರಾಡುವುದಾಗಿ ಘೋಷಿಸಬೇಕು.. ಜನರು ಕಾಂಗ್ರೆಸ್ ಅನ್ನು ಗಂಭೀರವಾಗಿ ಪರಿಗಣಿಸುವುದನ್ನು ಈಗಾಗಲೇ ನಿಲ್ಲಿಸಿದ್ದಾರೆ ಎಂದರು.

ಅಂತೆಯೇ, ದೆಹಲಿಯಲ್ಲಿ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತ ನೀರು ಸರಬರಾಜು ಮಾಡುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಕೇಜ್ರಿವಾಲ್, 'ಎಎಪಿಯ ಆಡಳಿತ ಮಾದರಿಯು ನಿರಂತರವಾಗಿ ಭರವಸೆಗಳನ್ನು ಈಡೇರಿಸಿದೆ. ಆದಾಗ್ಯೂ, ನನ್ನ ಅನುಪಸ್ಥಿತಿಯಲ್ಲಿ ಸಮಸ್ಯೆಗಳು ಉದ್ಭವಿಸಿದವು, ಇದರ ಪರಿಣಾಮವಾಗಿ ಅನೇಕ ನಿವಾಸಿಗಳಿಗೆ ನೀರಿನ ಬಿಲ್‌ಗಳು ವಿಪರೀತವಾಗಿ ಹೆಚ್ಚಾದವು.

"ತಮ್ಮ ಬಿಲ್‌ಗಳು ತಪ್ಪು ಎಂದು ಭಾವಿಸುವವರು ಪಾವತಿಸಬೇಕಾಗಿಲ್ಲ ಎಂದು ನಾನು ಸಾರ್ವಜನಿಕವಾಗಿ ಮತ್ತು ಅಧಿಕೃತವಾಗಿ ಘೋಷಿಸಲು ಬಯಸುತ್ತೇನೆ. ಚುನಾವಣೆಗಾಗಿ ಕಾಯಿರಿ.. ಎಎಪಿ ಸರ್ಕಾರ ರಚಿಸುತ್ತದೆ, ಮತ್ತು ನಾವು ಆ ತಪ್ಪು ಬಿಲ್‌ಗಳನ್ನು ಮನ್ನಾ ಮಾಡುತ್ತೇವೆ" ಎಂದು ಅವರು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್