ಅರವಿಂದ್ ಕೇಜ್ರಿವಾಲ್ 
ದೇಶ

ಕಾಂಗ್ರೆಸ್ ಪಕ್ಷವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ: ಅರವಿಂದ್ ಕೇಜ್ರಿವಾಲ್

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ, ದೆಹಲಿಯಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿದರು.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೈತ್ರಿಯಿಂದ ದೂರಾಗಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂಜ್ ಕೇಜ್ರಿವಾಲ್ ಕಾಂಗ್ರೆಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ, ದೆಹಲಿಯಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿದರು. ಎಎಪಿ ವಿರುದ್ಧ ಈ ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದನ್ನು ಅವರು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ಹೇಳಿದರು.

'ಜನರು ಕಾಂಗ್ರೆಸ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ' ಎಂದು ಹೇಳಿರುವ ಕೇಜ್ರಿವಾಲ್, ತಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಎಎಪಿ ವಿರುದ್ಧ ಕೈಜೋಡಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, "ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಎಎಪಿಯನ್ನು ಸೋಲಿಸಲು ಒಟ್ಟಾಗಿ ಹೋರಾಡುವುದಾಗಿ ಘೋಷಿಸಬೇಕು.. ಜನರು ಕಾಂಗ್ರೆಸ್ ಅನ್ನು ಗಂಭೀರವಾಗಿ ಪರಿಗಣಿಸುವುದನ್ನು ಈಗಾಗಲೇ ನಿಲ್ಲಿಸಿದ್ದಾರೆ ಎಂದರು.

ಅಂತೆಯೇ, ದೆಹಲಿಯಲ್ಲಿ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತ ನೀರು ಸರಬರಾಜು ಮಾಡುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಕೇಜ್ರಿವಾಲ್, 'ಎಎಪಿಯ ಆಡಳಿತ ಮಾದರಿಯು ನಿರಂತರವಾಗಿ ಭರವಸೆಗಳನ್ನು ಈಡೇರಿಸಿದೆ. ಆದಾಗ್ಯೂ, ನನ್ನ ಅನುಪಸ್ಥಿತಿಯಲ್ಲಿ ಸಮಸ್ಯೆಗಳು ಉದ್ಭವಿಸಿದವು, ಇದರ ಪರಿಣಾಮವಾಗಿ ಅನೇಕ ನಿವಾಸಿಗಳಿಗೆ ನೀರಿನ ಬಿಲ್‌ಗಳು ವಿಪರೀತವಾಗಿ ಹೆಚ್ಚಾದವು.

"ತಮ್ಮ ಬಿಲ್‌ಗಳು ತಪ್ಪು ಎಂದು ಭಾವಿಸುವವರು ಪಾವತಿಸಬೇಕಾಗಿಲ್ಲ ಎಂದು ನಾನು ಸಾರ್ವಜನಿಕವಾಗಿ ಮತ್ತು ಅಧಿಕೃತವಾಗಿ ಘೋಷಿಸಲು ಬಯಸುತ್ತೇನೆ. ಚುನಾವಣೆಗಾಗಿ ಕಾಯಿರಿ.. ಎಎಪಿ ಸರ್ಕಾರ ರಚಿಸುತ್ತದೆ, ಮತ್ತು ನಾವು ಆ ತಪ್ಪು ಬಿಲ್‌ಗಳನ್ನು ಮನ್ನಾ ಮಾಡುತ್ತೇವೆ" ಎಂದು ಅವರು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT