ದರ್ಗಾಕ್ಕೆ ಚಾದರ್ ಅರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು 
ದೇಶ

ಪ್ರಧಾನಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಸಚಿವ ಕಿರಣ್ ರಿಜಿಜು

ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಪಾರ್ಸಿ, ಬೌದ್ಧ ಅಥವಾ ಜೈನ್, ಎಲ್ಲರನ್ನೂ ದರ್ಗಾದಲ್ಲಿ ಸ್ವಾಗತಿಸಲಾಗುತ್ತದೆ. ಲಕ್ಷಾಂತರ ಜನರು ದರ್ಗಾಕ್ಕೆ ಭೇಟಿ ನೀಡುತ್ತಿದ್ದು, ಅವರಿಗೆ ಯಾವ ತೊಂದರೆ ಆಗದು, ಪ್ರಕ್ರಿಯೆ ಸರಳವಾಗಿರಬೇಕು ಎಂದು ರಿಜಿಜು ಹೇಳಿದರು.

ಜೈಪುರ: ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು. ದೆಹಲಿಯಿಂದ ಜೈಪುರಕ್ಕೆ ಬಂದ ಅವರು, ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಅಜ್ಮೀರ್ ತಲುಪಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಿಜಿಜು, ಪ್ರಧಾನ ಮಂತ್ರಿಯವರ ಸಹೋದರತ್ವ ಹಾಗೂ ದೇಶ ಒಗ್ಗಟ್ಟಾಗಿರಬೇಕು ಎನ್ನುವ ಸಂದೇಶದೊಂದಿಗೆ ಅಜ್ಮೀರ್ ಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿಯ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಬರಮಾಡಿಕೊಂಡರು. ಉರ್ಸ್‌ನ ಈ ಶುಭ ಸಂದರ್ಭದಲ್ಲಿ, ದೇಶದಲ್ಲಿ ಉತ್ತಮ ವಾತಾವರಣ ಸೃಷ್ಟಿಸಲು ನಾವು ಬಯಸುತ್ತೇವೆ. ದೇಶದ ಸಾಮರಸ್ಯಕ್ಕೆ ಧಕ್ಕೆಯಾಗುವ ಕೆಲಸವನ್ನು ಯಾರು ಮಾಡಬಾರದು ಎಂದು ರಿಜಿಜು ಹೇಳಿದರು.

ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಪಾರ್ಸಿ, ಬೌದ್ಧ ಅಥವಾ ಜೈನ್, ಎಲ್ಲರನ್ನೂ ದರ್ಗಾದಲ್ಲಿ ಸ್ವಾಗತಿಸಲಾಗುತ್ತದೆ. ಲಕ್ಷಾಂತರ ಜನರು ದರ್ಗಾಕ್ಕೆ ಭೇಟಿ ನೀಡುತ್ತಿದ್ದು, ಅವರಿಗೆ ಯಾವ ತೊಂದರೆ ಆಗದು, ಪ್ರಕ್ರಿಯೆ ಸರಳವಾಗಿರಬೇಕು ಎಂದು ರಿಜಿಜು ಹೇಳಿದರು.

ದರ್ಗಾವನ್ನು ಶಿವ ದೇಗುಲದ ಮೇಲೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಾದರ್ ಅರ್ಪಿಸಲಷ್ಟೇ ಬಂದಿದ್ದೇನೆ. ಏನನ್ನೂ ಪ್ರದರ್ಶಿಸಲೋ ಅಥವಾ ಏನಾದರೂ ಹೇಳಲು ಬಂದಿಲ್ಲ. ದೇಶದ ಜನರೆಲ್ಲರೂ ನೆಮ್ಮದಿಯಿಂದ ಇರಬೇಕು ಎನ್ನುವ ಪ್ರಧಾನಿ ಮೋದಿ ಅವರ ಸಂದೇಶದೊಂದಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT