ದರ್ಗಾಕ್ಕೆ ಚಾದರ್ ಅರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು 
ದೇಶ

ಪ್ರಧಾನಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಸಚಿವ ಕಿರಣ್ ರಿಜಿಜು

ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಪಾರ್ಸಿ, ಬೌದ್ಧ ಅಥವಾ ಜೈನ್, ಎಲ್ಲರನ್ನೂ ದರ್ಗಾದಲ್ಲಿ ಸ್ವಾಗತಿಸಲಾಗುತ್ತದೆ. ಲಕ್ಷಾಂತರ ಜನರು ದರ್ಗಾಕ್ಕೆ ಭೇಟಿ ನೀಡುತ್ತಿದ್ದು, ಅವರಿಗೆ ಯಾವ ತೊಂದರೆ ಆಗದು, ಪ್ರಕ್ರಿಯೆ ಸರಳವಾಗಿರಬೇಕು ಎಂದು ರಿಜಿಜು ಹೇಳಿದರು.

ಜೈಪುರ: ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು. ದೆಹಲಿಯಿಂದ ಜೈಪುರಕ್ಕೆ ಬಂದ ಅವರು, ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಅಜ್ಮೀರ್ ತಲುಪಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಿಜಿಜು, ಪ್ರಧಾನ ಮಂತ್ರಿಯವರ ಸಹೋದರತ್ವ ಹಾಗೂ ದೇಶ ಒಗ್ಗಟ್ಟಾಗಿರಬೇಕು ಎನ್ನುವ ಸಂದೇಶದೊಂದಿಗೆ ಅಜ್ಮೀರ್ ಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿಯ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಬರಮಾಡಿಕೊಂಡರು. ಉರ್ಸ್‌ನ ಈ ಶುಭ ಸಂದರ್ಭದಲ್ಲಿ, ದೇಶದಲ್ಲಿ ಉತ್ತಮ ವಾತಾವರಣ ಸೃಷ್ಟಿಸಲು ನಾವು ಬಯಸುತ್ತೇವೆ. ದೇಶದ ಸಾಮರಸ್ಯಕ್ಕೆ ಧಕ್ಕೆಯಾಗುವ ಕೆಲಸವನ್ನು ಯಾರು ಮಾಡಬಾರದು ಎಂದು ರಿಜಿಜು ಹೇಳಿದರು.

ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಪಾರ್ಸಿ, ಬೌದ್ಧ ಅಥವಾ ಜೈನ್, ಎಲ್ಲರನ್ನೂ ದರ್ಗಾದಲ್ಲಿ ಸ್ವಾಗತಿಸಲಾಗುತ್ತದೆ. ಲಕ್ಷಾಂತರ ಜನರು ದರ್ಗಾಕ್ಕೆ ಭೇಟಿ ನೀಡುತ್ತಿದ್ದು, ಅವರಿಗೆ ಯಾವ ತೊಂದರೆ ಆಗದು, ಪ್ರಕ್ರಿಯೆ ಸರಳವಾಗಿರಬೇಕು ಎಂದು ರಿಜಿಜು ಹೇಳಿದರು.

ದರ್ಗಾವನ್ನು ಶಿವ ದೇಗುಲದ ಮೇಲೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಾದರ್ ಅರ್ಪಿಸಲಷ್ಟೇ ಬಂದಿದ್ದೇನೆ. ಏನನ್ನೂ ಪ್ರದರ್ಶಿಸಲೋ ಅಥವಾ ಏನಾದರೂ ಹೇಳಲು ಬಂದಿಲ್ಲ. ದೇಶದ ಜನರೆಲ್ಲರೂ ನೆಮ್ಮದಿಯಿಂದ ಇರಬೇಕು ಎನ್ನುವ ಪ್ರಧಾನಿ ಮೋದಿ ಅವರ ಸಂದೇಶದೊಂದಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಂಡೆ ಬ್ಲಾಸ್ಟ್ ಗೆ ಗರ್ಭಿಣಿ ಚಿರತೆ, 3 ಮರಿಗಳ ಸಾವು: ತನಿಖೆಗೆ ಆದೇಶ, 'ತಪ್ಪು ಮಾಡಿದವರ ಬಿಡೋ ಮಾತೇ ಇಲ್ಲ'!

ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳ ದಾಳಿ; CCTV Video Viral

SCROLL FOR NEXT