ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್- ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ online desk
ದೇಶ

Pakistan ಕ್ಕೆ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿ: Afghanistan ವೈಮಾನಿಕ ದಾಳಿ ಬಗ್ಗೆ ಭಾರತ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.

ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನಕ್ಕೆ ಅದರ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವುದಕ್ಕಾಗಿ ನೆರೆಹೊರೆಯವರನ್ನು ದೂಷಿಸುವುದು ಹಳೆಯ ಚಾಳಿಯಾಗಿಬಿಟ್ಟಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಟೀಕಿಸಿದೆ.

ಕೆಲವು ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಅಫ್ಘಾನಿಸ್ತಾನದ ಕೆಲವು ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅಫ್ಘಾನ್ ನಾಗರಿಕರ ಮೇಲಿನ ವೈಮಾನಿಕ ದಾಳಿಯಲ್ಲಿ ಹಲವಾರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವ ಮಾಧ್ಯಮ ವರದಿಗಳನ್ನು ನಾವು ಗಮನಿಸಿದ್ದೇವೆ. ಅಮಾಯಕ ನಾಗರಿಕರ ಮೇಲಿನ ಯಾವುದೇ ದಾಳಿಯನ್ನು ನಾವು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

"ತನ್ನ ಆಂತರಿಕ ವೈಫಲ್ಯಗಳಿಗೆ ನೆರೆಹೊರೆಯವರನ್ನು ದೂಷಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸವಾಗಿದೆ. ಈ ನಿಟ್ಟಿನಲ್ಲಿ ಅಫ್ಘಾನ್ ವಕ್ತಾರರ ಪ್ರತಿಕ್ರಿಯೆಯನ್ನು ನಾವು ಗಮನಿಸಿದ್ದೇವೆ" ಎಂದು ಇದೇ ವೇಳೆ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

SCROLL FOR NEXT