ಪ್ಯಾರಿ ದೀದಿ ಯೋಜನೆಯನ್ನು ಘೋಷಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ದೇಶ

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 2,500 ರೂ: ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಕರ್ನಾಟಕದ ಮಾದರಿಯಲ್ಲೇ ದೆಹಲಿಯಲ್ಲೂ 'ಪ್ಯಾರಿ ದೀದಿ ಯೋಜನೆ' ಘೋಷಿಸಿದ ಕಾಂಗ್ರೆಸ್.

ನವದೆಹಲಿ: ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವ 'ಪ್ಯಾರಿ ದೀದಿ ಯೋಜನೆ'ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡ ಮಾದರಿಯಲ್ಲೇ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಲಿದೆ ಎಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊದಲ ಸಚಿವ ಸಂಪುಟದ ಸಭೆಯಲ್ಲೇ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

'ಇಂದು ನಾನು ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಲು ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಮತ್ತು ಹೊಸ ಸಚಿವ ಸಂಪುಟದ ಮೊದಲ ದಿನದಲ್ಲಿಯೇ ನಾವು ರಾಜಧಾನಿಯಲ್ಲಿರುವ ಪ್ರತಿ ಮಹಿಳೆಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವನ್ನು ನೀಡುವ ಯೋಜನೆಯನ್ನು ನಾವು ಜಾರಿಗೆ ತರುತ್ತೇವೆ' ಎಂದು ಹೇಳಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ.

ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್, ಪಕ್ಷದ ದೆಹಲಿ ಉಸ್ತುವಾರಿ ಖಾಜಿ ನಿಜಾಮುದ್ದೀನ್ ಮತ್ತು ಇತರ ಹಿರಿಯ ನಾಯಕರು ಘೋಷಣೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎಎಪಿ ಮತ್ತು ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ, ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಎಎಪಿ, ಹಲವು ವಿಶೇಷ ಯೋಜನೆಗಳನ್ನು ಈಗಾಗಲೇ ಘೋಷಿಸಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕೂಡ ಇದೀಗ ಹಲವು ಘೋಷಣೆಗಳನ್ನು ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

SCROLL FOR NEXT