ರಾಜೀವ್ ಕುಮಾರ್ 
ದೇಶ

Freebie ವ್ಯಾಖ್ಯಾನ ಕಷ್ಟ; ಚುನಾವಣಾ ಆಯೋಗದ 'ಕೈ ಕಟ್ಟಲಾಗಿದೆ': ಸಿಇಸಿ ರಾಜೀವ್ ಕುಮಾರ್

ಉಚಿತ ಘೋಷಣೆಗಳನ್ನು ಮಾಡುವಾಗ, ಜನರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆಯೂ ತಿಳಿದಿರಬೇಕು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ನವದೆಹಲಿ: "ಉಚಿತ"(freebie) ಎಂದರೇನು ಎಂಬುದನ್ನು ವ್ಯಾಖ್ಯಾನಿಸುವುದು ತುಂಬಾ ಕಷ್ಟಕರವಾಗಿದೆ ಮತ್ತು ಈ ವಿಚಾರದಲ್ಲಿ ಚುನಾವಣಾ ಆಯೋಗದ "ಕೈ ಕಟ್ಟಲಾಗಿದೆ". ಏಕೆಂದರೆ ವಿಷಯ ನ್ಯಾಯಾಲಯದಲ್ಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ) ಕುಮಾರ್ ಅವರು, 'ಫ್ರೀ ಬೀಸ್‌'ಗೆ "ಅನುಮೋದಿತ ಮತ್ತು ಕಾನೂನಿನ ಮೂಲಕ ಉತ್ತರ ಕಂಡುಕೊಳ್ಳಲು ಇದು "ಸೂಕ್ತ ಸಮಯ" ಎಂದರು.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳನ್ನು ಘೋಷಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯವು ನ್ಯಾಯಾಲಯದಲ್ಲಿದೆ. " ಉಚಿತ ಎಂದರೆ ಏನು? ನನಗೆ ಬಿಟ್ಟಿ ಕೊಡುವುದು ಬೇರೆಯವರಿಗೆ ಅದು ಅರ್ಹತೆಯಾಗಿರಬಹುದು. ಉಚಿತ ಏನೆಂದು ವ್ಯಾಖ್ಯಾನಿಸುವುದು ತುಂಬಾ ಕಷ್ಟ" ಎಂದು ಹೇಳಿದರು.

ಉಚಿತ ಘೋಷಣೆಗಳನ್ನು ಮಾಡುವಾಗ, ಜನರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆಯೂ ತಿಳಿದಿರಬೇಕು ಎಂದು ರಾಜೀವ್ ಕುಮಾರ್ ತಿಳಿಸಿದರು.

"ರಾಜ್ಯದ ಹಣಕಾಸಿನ ಸ್ಥಿತಿ ಏನೆಂಬುದನ್ನು ನೋಡುವುದು ಅವಶ್ಯಕ. ಸಾಲ-ಜಿಡಿಪಿ ಅನುಪಾತ ಏನು? ಆ ಭರವಸೆಯ ಮೇಲೆ ನೀವು ಎಷ್ಟು ಸಾಲ ಪಡೆಯುತ್ತೀರಿ? ಈ ಭರವಸೆಯ ಆರ್ಥಿಕ ವೆಚ್ಚ ಎಷ್ಟು?" ಎಂಬುದನ್ನು ಅವರು ಅರಿತಿರಬೇಕು ಎಂದರು.

"ನಾವು ಮುಂದಿನ ಪೀಳಿಗೆಯ ಭವಿಷ್ಯವನ್ನು ಅಡಮಾನ ಇಡಲು ಸಾಧ್ಯವಿಲ್ಲ, ಇದು ತುಂಬಾ ಗಂಭೀರವಾದ ವಿಷಯವಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT