ಹೊಸ ವೈರಸ್ ಬಗ್ಗೆ ಕಲಾವಿದರೊಬ್ಬರಿಂದ ಜಾಗೃತಿ ಮೂಡಿಸುವ ಪ್ರಯತ್ನ  
ದೇಶ

HMPV: ಕಣ್ಗಾವಲು ಹೆಚ್ಚಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ.

ನವದೆಹಲಿ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ವಿರುದ್ಧ ತಡೆಗಟ್ಟುವ ಕ್ರಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿಯನ್ನು ಬಲಪಡಿಸಲು ರಾಜ್ಯಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ILI) ಮತ್ತು ತೀವ್ರ ಉಸಿರಾಟದ ಸೋಂಕಿನ ಬಗ್ಗೆ (SARI) ಕಣ್ಗಾವಲು ಬಲಪಡಿಸಲು ಸಲಹೆ ನೀಡಲಾಗಿದೆ.

ಜನರಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾ ದೇಶದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರು ಇತ್ತೀಚೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಡೆಸಿದ ವರ್ಚುವಲ್ ಸಭೆ ನಂತರ ಈ ನಿರ್ದೇಶನವನ್ನು ನೀಡಲಾಗಿದೆ.

ಸಭೆಯಲ್ಲಿ, ಇಲ್ಲಿಯವರೆಗೆ ಸಂಗ್ರಹಿಸಲಾದ ಮಾಹಿತಿಯು ದೇಶದಲ್ಲಿ ಎಲ್ಲಿಯೂ ILI/SARI ಪ್ರಕರಣಗಳಲ್ಲಿ ಯಾವುದೇ ಅಸಾಮಾನ್ಯ ಏರಿಕೆಯನ್ನು ಕಂಡಿಲ್ಲ ಎಂದು ಹೇಳಲಾಗಿದೆ. 2001 ರಿಂದ ಜಾಗತಿಕವಾಗಿ ಪ್ರಸ್ತುತವಾಗಿರುವ ಹೆಚ್ ಎಂಪಿವಿಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಒತ್ತಿ ಹೇಳಿದರು. ILI/SARI ಕಣ್ಗಾವಲು ಬಲಪಡಿಸಲು ಮತ್ತು ಪರಿಶೀಲಿಸಲು ರಾಜ್ಯಗಳಿಗೆ ಸಲಹೆ ನೀಡಿದರು. ಉಸಿರಾಟದ ಕಾಯಿಲೆಗಳ ಹೆಚ್ಚಳವು ಸಾಮಾನ್ಯವಾಗಿ ಚಳಿಗಾಲದ ತಿಂಗಳುಗಳಲ್ಲಿ ಕಂಡುಬರುತ್ತದೆ ಎಂದು ಪುನರುಚ್ಚರಿಸಿದ ಸಚಿವಾಲಯವು ಉಸಿರಾಟದ ಸಂಬಂಧಿ ಕಾಯಿಲೆ ಪ್ರಕರಣಗಳಲ್ಲಿ ಯಾವುದೇ ಸಂಭಾವ್ಯ ಉಲ್ಬಣಕ್ಕೆ ದೇಶವು ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದೆ.

ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಅನೇಕ ಉಸಿರಾಟದ ವೈರಸ್‌ಗಳಲ್ಲಿ ಒಂದಾಗಿದೆ, ಇದು ಎಲ್ಲಾ ವಯಸ್ಸಿನ ಜನರಲ್ಲಿ ವಿಶೇಷವಾಗಿ ಚಳಿಗಾಲದಲ್ಲಿ ಮತ್ತು ವಸಂತಕಾಲದ ಆರಂಭದಲ್ಲಿ ಸೋಂಕನ್ನು ಉಂಟುಮಾಡುತ್ತದೆ. ವೈರಸ್ ಸೋಂಕು ಸಾಮಾನ್ಯವಾಗಿ ಸೌಮ್ಯವಾದ ಮತ್ತು ಸ್ವಯಂ-ಸೀಮಿತಗೊಳಿಸುವ ಸ್ಥಿತಿಯಾಗಿದೆ.

ಮುತುವರ್ಜಿ ಹೇಗೆ?: ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ಕೈಗಳನ್ನು ತೊಳೆಯುವಂತಹ ಸರಳ ಕ್ರಮಗಳೊಂದಿಗೆ ವೈರಸ್ ಹರಡುವುದನ್ನು ತಡೆಗಟ್ಟುವ ಬಗ್ಗೆ ಜನಸಂಖ್ಯೆಯಲ್ಲಿ ಜಾಗೃತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಯಿತು. ಕೈ ತೊಳೆಯದೆ ಕಣ್ಣು, ಬಾಯಿ, ಮೂಗು ಮುಟ್ಟಬೇಡಿ, ರೋಗದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಿ; ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel