ನಟ ಅಲ್ಲು ಅರ್ಜುನ್ 
ದೇಶ

'ಪುಷ್ಪ 2' ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ದುರಂತ ಸಂಭವಿಸಿದ 30 ದಿನಗಳ ನಂತರ, ನಟ ಅಲ್ಲು ಅರ್ಜುನ್ ಮಂಗಳವಾರ ಬೆಳಗ್ಗೆ ಸಿಕಂದರಾಬಾದ್‌ನ ಕಿಮ್ಸ್‌ನಲ್ಲಿ ಗಾಯಾಳು ಒಂಬತ್ತು ವರ್ಷದ ಶ್ರೀ ತೇಜ್ ಅವರನ್ನು ಭೇಟಿ ಮಾಡಿದರು. ಅಲ್ಲು ಅರ್ಜುನ್ ಜೊತೆ TGFDC ಅಧ್ಯಕ್ಷ ದಿಲ್ ರಾಜು ಕೂಡ ಇದ್ದರು. ಪೊಲೀಸ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

ಆರಂಭದಲ್ಲಿ ಡಿಸೆಂಬರ್ 5 ರಂದು ಶ್ರೀ ತೇಜ್ ಅವರನ್ನು ಭೇಟಿ ಮಾಡಲು ಅಲ್ಲು ಅರ್ಜುನ್ ಯೋಜಿಸಿದ್ದರು. ಆದರೆ ಅವರ ಭೇಟಿಯನ್ನು ಮರುಪರಿಶೀಲಿಸುವಂತೆ ರಾಮಗೋಪಾಲಪೇಟೆ ಪೊಲೀಸರು ನೋಟಿಸ್ ನೀಡಿದ ನಂತರ ಭೇಟಿಯನ್ನು ರದ್ದುಗೊಳಿಸಿದ್ದರು. ಆದರೆ, ನಂತರದ ನೋಟಿಸ್‌ನಲ್ಲಿ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಮಾಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದರು.

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಪ್ರದರ್ಶನದ ವೇಳೆ 39 ವರ್ಷದ ರೇವತಿ ಪ್ರಾಣ ಕಳೆದುಕೊಂಡಿದ್ದರು. ಅವರ ಒಂಬತ್ತು ವರ್ಷದ ಮಗ ಶ್ರೀ ತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ 34 ದಿನಗಳಿಂದ ಶ್ರೀ ತೇಜ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!