ನಟ ಅಲ್ಲು ಅರ್ಜುನ್ 
ದೇಶ

'ಪುಷ್ಪ 2' ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ದುರಂತ ಸಂಭವಿಸಿದ 30 ದಿನಗಳ ನಂತರ, ನಟ ಅಲ್ಲು ಅರ್ಜುನ್ ಮಂಗಳವಾರ ಬೆಳಗ್ಗೆ ಸಿಕಂದರಾಬಾದ್‌ನ ಕಿಮ್ಸ್‌ನಲ್ಲಿ ಗಾಯಾಳು ಒಂಬತ್ತು ವರ್ಷದ ಶ್ರೀ ತೇಜ್ ಅವರನ್ನು ಭೇಟಿ ಮಾಡಿದರು. ಅಲ್ಲು ಅರ್ಜುನ್ ಜೊತೆ TGFDC ಅಧ್ಯಕ್ಷ ದಿಲ್ ರಾಜು ಕೂಡ ಇದ್ದರು. ಪೊಲೀಸ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

ಆರಂಭದಲ್ಲಿ ಡಿಸೆಂಬರ್ 5 ರಂದು ಶ್ರೀ ತೇಜ್ ಅವರನ್ನು ಭೇಟಿ ಮಾಡಲು ಅಲ್ಲು ಅರ್ಜುನ್ ಯೋಜಿಸಿದ್ದರು. ಆದರೆ ಅವರ ಭೇಟಿಯನ್ನು ಮರುಪರಿಶೀಲಿಸುವಂತೆ ರಾಮಗೋಪಾಲಪೇಟೆ ಪೊಲೀಸರು ನೋಟಿಸ್ ನೀಡಿದ ನಂತರ ಭೇಟಿಯನ್ನು ರದ್ದುಗೊಳಿಸಿದ್ದರು. ಆದರೆ, ನಂತರದ ನೋಟಿಸ್‌ನಲ್ಲಿ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಮಾಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದರು.

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಪ್ರದರ್ಶನದ ವೇಳೆ 39 ವರ್ಷದ ರೇವತಿ ಪ್ರಾಣ ಕಳೆದುಕೊಂಡಿದ್ದರು. ಅವರ ಒಂಬತ್ತು ವರ್ಷದ ಮಗ ಶ್ರೀ ತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ 34 ದಿನಗಳಿಂದ ಶ್ರೀ ತೇಜ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT