ದೇಶ

ನೇಪಾಳದ ಕಠ್ಮಂಡುನಲ್ಲಿ ಪ್ರಬಲ ಭೂಕಂಪ: ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಪರಿಣಾಮ

ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರವು ಬೆಳಗ್ಗೆ 6:50 ಕ್ಕೆ ದಾಖಲಿಸಿದೆ.

ಭೂಕಂಪದ ಕೇಂದ್ರಬಿಂದು ಚೀನಾದ ಡಿಂಗ್ಗಿಯಾಗಿದ್ದು, ಇದರಿಂದ ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಹೆಚ್ಚು ಪರಿಣಾಮ ಬೀರಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಭೂಕಂಪವು ನೇಪಾಳ-ಟಿಬೆಟ್ ಗಡಿಯ ಬಳಿ ಲೊಬುಚೆಯಿಂದ ಈಶಾನ್ಯಕ್ಕೆ 93 ಕಿಮೀ ದೂರದಲ್ಲಿ ಬೆಳಿಗ್ಗೆ 6.35 ಕ್ಕೆ ಸಂಭವಿಸಿದೆ.

ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಪ್ರಮಾಣವನ್ನು ಇನ್ನೂ ದೃಢೀಕರಿಸಬೇಕಾಗಿದ್ದರೂ, ಆರಂಭಿಕ ಅಂದಾಜುಗಳು ರಿಕ್ಟರ್ ಮಾಪಕದಲ್ಲಿ 6.0 ಮತ್ತು 7.0 ರ ನಡುವೆ ಇರಬಹುದೆಂದು ಸೂಚಿಸುತ್ತವೆ.

ಕಾವ್ರೆಪಲಾಂಚ್‌ವೋಕ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ಕಠ್ಮಂಡುವಿನಲ್ಲಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಬಂದರು.ಆದರೆ, ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT