ದೇಶ

ನೇಪಾಳದ ಕಠ್ಮಂಡುನಲ್ಲಿ ಪ್ರಬಲ ಭೂಕಂಪ: ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಪರಿಣಾಮ

ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರವು ಬೆಳಗ್ಗೆ 6:50 ಕ್ಕೆ ದಾಖಲಿಸಿದೆ.

ಭೂಕಂಪದ ಕೇಂದ್ರಬಿಂದು ಚೀನಾದ ಡಿಂಗ್ಗಿಯಾಗಿದ್ದು, ಇದರಿಂದ ಬಿಹಾರ, ದೆಹಲಿ-ಎನ್​ಸಿಆರ್​ ಮೇಲೂ ಹೆಚ್ಚು ಪರಿಣಾಮ ಬೀರಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಭೂಕಂಪವು ನೇಪಾಳ-ಟಿಬೆಟ್ ಗಡಿಯ ಬಳಿ ಲೊಬುಚೆಯಿಂದ ಈಶಾನ್ಯಕ್ಕೆ 93 ಕಿಮೀ ದೂರದಲ್ಲಿ ಬೆಳಿಗ್ಗೆ 6.35 ಕ್ಕೆ ಸಂಭವಿಸಿದೆ.

ನೇಪಾಳದಲ್ಲಿ ಹುಟ್ಟಿಕೊಂಡ ಭೂಕಂಪ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.

ಪ್ರಮಾಣವನ್ನು ಇನ್ನೂ ದೃಢೀಕರಿಸಬೇಕಾಗಿದ್ದರೂ, ಆರಂಭಿಕ ಅಂದಾಜುಗಳು ರಿಕ್ಟರ್ ಮಾಪಕದಲ್ಲಿ 6.0 ಮತ್ತು 7.0 ರ ನಡುವೆ ಇರಬಹುದೆಂದು ಸೂಚಿಸುತ್ತವೆ.

ಕಾವ್ರೆಪಲಾಂಚ್‌ವೋಕ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ಕಠ್ಮಂಡುವಿನಲ್ಲಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಬಂದರು.ಆದರೆ, ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT