ಇಸ್ರೊ ಮುಖ್ಯಸ್ಥರಾಗಿ ನಾರಾಯಣನ್ ನೇಮಕ  
ದೇಶ

ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ನೇಮಕ: ಜನವರಿ 14ಕ್ಕೆ ಅಧಿಕಾರ ಸ್ವೀಕಾರ

ಎಸ್ ಸೋಮನಾಥ್ ಅವರು ಜನವರಿ 2022 ರಲ್ಲಿ ಇಸ್ರೋ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು. ಭಾರತವು ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ರೋವರ್ ನ್ನು ಇಳಿಸಿದ ವಿಶ್ವದ ಮೊದಲ ದೇಶವಾಯಿತು.

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸಚಿವ ಸಂಪುಟದ ನೇಮಕಾತಿ ಸಮಿತಿಯು ವಲಿಯಮಾಲಾ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ಮುಖ್ಯಸ್ಥರಾಗಿರುವ ನಾರಾಯಣನ್ ಅವರು ಇಸ್ರೊ ಮುಖ್ಯಸ್ಥರಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ. ಬಾಹ್ಯಾಕಾಶ ಆಯೋಗದ ಅಧ್ಯಕ್ಷರೂ ಆಗಿರುವ ನಾರಾಯಣನ್ ಅವರು ಕ್ರಯೋಜೆನಿಕ್ ಎಂಜಿನ್ ನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಇದು ದೇಶಕ್ಕೆ ನಿರಾಕರಿಸಲ್ಪಟ್ಟ ತಂತ್ರಜ್ಞಾನವಾಗಿದೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ನಾರಾಯಣನ್ ಅವರು, ನಾವು ಭಾರತಕ್ಕೆ ಸ್ಪಷ್ಟ ಮಾರ್ಗಸೂಚಿಯನ್ನು ಹೊಂದಿದ್ದೇವೆ. ನಮ್ಮಲ್ಲಿ ಉತ್ತಮ ಪ್ರತಿಭೆ ಇರುವುದರಿಂದ ಇಸ್ರೋವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವ ಭರವಸೆ ಇದೆ ಎಂದು ಹೇಳಿದ್ದಾರೆ.

ನಾರಾಯಣನ್ ಅವರು ಪ್ರತಿಷ್ಠಿತ ವಿಜ್ಞಾನಿಯಾಗಿದ್ದು, (ಅಪೆಕ್ಸ್ ಸ್ಕೇಲ್)ಇಸ್ರೋದಲ್ಲಿ ಹಿರಿಯ ನಿರ್ದೇಶಕರಾಗಿದ್ದಾರೆ. ಅವರು ಮುಖ್ಯಸ್ಥರಾಗಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್, ಉಡಾವಣಾ ವಾಹನಗಳಿಗೆ ದ್ರವ, ಅರೆ-ಕ್ರಯೋಜೆನಿಕ್ ಮತ್ತು ಕ್ರಯೋಜೆನಿಕ್ ಪ್ರೊಪಲ್ಷನ್ ಹಂತಗಳ ಅಭಿವೃದ್ಧಿ, ಉಪಗ್ರಹಗಳಿಗೆ ರಾಸಾಯನಿಕ ಮತ್ತು ವಿದ್ಯುತ್ ಪ್ರೊಪಲ್ಷನ್ ಸಿಸ್ಟಮ್ಗಳು, ಉಡಾವಣಾ ವಾಹನಗಳಿಗೆ ನಿಯಂತ್ರಣ ವ್ಯವಸ್ಥೆಗಳು ಮತ್ತು ಬಾಹ್ಯಾಕಾಶ ವ್ಯವಸ್ಥೆಗಳ ಆರೋಗ್ಯಕ್ಕಾಗಿ ಸಂಜ್ಞಾಪರಿವರ್ತಕಗಳ ಅಭಿವೃದ್ಧಿ ಮೇಲ್ವಿಚಾರಣೆಯಲ್ಲಿ ತೊಡಗಿಸಿಕೊಂಡಿದೆ.

ನಾರಾಯಣನ್ ಅವರು ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕೌನ್ಸಿಲ್-ಬಾಹ್ಯಾಕಾಶ ಸಾರಿಗೆ ವ್ಯವಸ್ಥೆಯ (PMC-STS) ಅಧ್ಯಕ್ಷರೂ ಆಗಿದ್ದಾರೆ, ಎಲ್ಲಾ ಉಡಾವಣಾ ವಾಹನ ಯೋಜನೆಗಳು ಮತ್ತು ಕಾರ್ಯಕ್ರಮಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಮತ್ತು ಗಗನ್‌ಯಾನಕ್ಕೆ ರಾಷ್ಟ್ರೀಯ ಮಟ್ಟದ ಮಾನವ ರೇಟೆಡ್ ಪ್ರಮಾಣೀಕರಣ ಮಂಡಳಿಯ (HRCB) ಅಧ್ಯಕ್ಷರಾಗಿದ್ದಾರೆ.

ತಮ್ಮ ಶಾಲಾ ದಿನಗಳಲ್ಲಿ ತಮಿಳು ಮಾಧ್ಯಮದಲ್ಲಿ ಅಧ್ಯಯನ ಮಾಡಿದ ನಾರಾಯಣನ್ ಖರಗ್‌ಪುರದ ಐಐಟಿಯಿಂದ ಕ್ರಯೋಜೆನಿಕ್ ಎಂಜಿನಿಯರಿಂಗ್‌ನಲ್ಲಿ ಎಂಟೆಕ್ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದರು, ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್ ತಜ್ಞರಾಗಿ 1984 ರಲ್ಲಿ ಇಸ್ರೋಗೆ ಸೇರಿದರು. 2018 ರಲ್ಲಿ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್‌ನ ನಿರ್ದೇಶಕರಾದರು.

ಎಸ್ ಸೋಮನಾಥ್ ಅವರು ಜನವರಿ 2022 ರಲ್ಲಿ ಇಸ್ರೋ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು. ಭಾರತವು ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ರೋವರ್ ನ್ನು ಇಳಿಸಿದ ವಿಶ್ವದ ಮೊದಲ ದೇಶವಾಯಿತು. ಅಮೆರಿಕಾ, ಹಿಂದಿನ ಸೋವಿಯತ್ ಯೂನಿಯನ್ ಮತ್ತು ಚೀನಾದ ನಂತರ ಭಾರತ ಚಂದ್ರನ ಮೇಲೆ ಮೃದುವಾದ ಇಳಿಯುವಿಕೆಯನ್ನು ಸಾಧಿಸಿದ ದೇಶಗಳ ಕ್ಲಬ್ ಗೆ ಸೇರಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT