ಸಾಂಕೇತಿಕ ಚಿತ್ರ online desk
ದೇಶ

Maharashtra ಗ್ರಾಮಸ್ಥರನ್ನು ಕಾಡುತ್ತಿದೆ ವಿಚಿತ್ರ ಆರೋಗ್ಯ ಸಮಸ್ಯೆ!

ಕೆಲವೇ ದಿನಗಳಲ್ಲಿ ಕೂದಲು ಉದುರಿ ಬೊಕ್ಕತಲೆಯ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳೂ ಈ ಬಗ್ಗೆ ತಲೆ ಕೆಡಿಸಿಕೊಂಡು ನೀರಿನ ಮಾಲಿನ್ಯ ಉಂಟಾಗಿರಬಹುದೇ? ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಬುಲ್ಧಾನ: ಮಹಾರಾಷ್ಟ್ರದಲ್ಲಿ ವಿಚಿತ್ರ ಆರೋಗ್ಯ ಸಮಸ್ಯೆಯೊಂದು ಜನರನ್ನು ಕಾಡುತ್ತಿದೆ. ಬುಲ್ಧಾನ ಜಿಲ್ಲೆಯ ಗ್ರಾಮವೊಂದರಲ್ಲಿ ಈ ವಿಚಿತ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಜನತೆ ಏಕಾ ಏಕಿ ಕೂದಲು ಉದುರುವಿಕೆಯಿಂದ ಕಂಗಾಲಾಗಿದ್ದಾರೆ.

ಕೆಲವೇ ದಿನಗಳಲ್ಲಿ ಕೂದಲು ಉದುರಿ ಬೊಕ್ಕತಲೆಯ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳೂ ಈ ಬಗ್ಗೆ ತಲೆ ಕೆಡಿಸಿಕೊಂಡು ನೀರಿನ ಮಾಲಿನ್ಯ ಉಂಟಾಗಿರಬಹುದೇ? ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ವಿಷಯ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಂಡ ಮಂಗಳವಾರ ಗ್ರಾಮಗಳಲ್ಲಿ ಸಮೀಕ್ಷೆ ಆರಂಭಿಸಿತು. ಸಂತ್ರಸ್ತ ಜನರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದು ಶೇಗಾಂವ್ ಆರೋಗ್ಯ ಅಧಿಕಾರಿ ಡಾ ದೀಪಾಲಿ ಬಹೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಿಲ್ಲಾ ಪರಿಷತ್‌ನ ಆರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಶೇಗಾಂವ ತಾಲೂಕಿನ ಕಳವಾಡ, ಬೋಂಡಗಾಂವ, ಹಿಂಗನಾಳ ಗ್ರಾಮಗಳ ಸುಮಾರು 30 ಮಂದಿ ಕೂದಲುದುರುವಿಕೆ ಮತ್ತು ಬೊಕ್ಕತಲೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೋಗಲಕ್ಷಣಗಳಿಗೆ ಅನುಗುಣವಾಗಿ ಇಲಾಖೆಯು ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಯನ್ನು ಪ್ರಾರಂಭಿಸಿದೆ ಮತ್ತು ಚರ್ಮದ ಆರೈಕೆಗೆ ತಜ್ಞರ ಸಲಹೆಯನ್ನು ಸಹ ತೆಗೆದುಕೊಳ್ಳಲಾಗುತ್ತಿದೆ ಎಂದು ಬಹೇಕರ್ ಮಂಗಳವಾರ ಹೇಳಿದರು.

ಸಂಭವನೀಯ ಮಾಲಿನ್ಯವನ್ನು ಪರಿಶೀಲಿಸಲು ಈ ಗ್ರಾಮಗಳ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾ ಪರಿಷತ್ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT