ಕಾಲೇಜು ಆವರಣಕ್ಕೆ ನುಗ್ಗಿದ ಕಾಡಾನೆ 
ದೇಶ

Video: ಕಾಲೇಜಿನಲ್ಲಿ ಕಾಡಾನೆ ಕಾಟ; ವಿದ್ಯಾರ್ಥಿಗಳು ಭಯಭೀತ!

ಒಡಿಶಾದ ಪುರಿ ಜಿಲ್ಲೆಯ ಕನಾಸ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಕಾಡಾನೆಯೊಂದು ಸ್ಥಳೀಯ ಕಾಲೇಜೊಂದರ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿತ್ತು.

ಭುವನೇಶ್ವರ: ಅತ್ತ ಕೇರಳದ ದೇಗುಲ ಉತ್ಸವದ ವೇಳೆ ತರಬೇತಿ ಪಡೆದಿದ್ದ ಆನೆ ರಂಪಾಚ ವಿಚಾರ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲೂ ಅಂತಹುದೇ ಘಟನೆಯೊಂದು ವರದಿಯಾಗಿದೆ.

ಹೌದು.. ಒಡಿಶಾದ ಪುರಿ ಜಿಲ್ಲೆಯ ಕನಾಸ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಕಾಡಾನೆಯೊಂದು ಸ್ಥಳೀಯ ಕಾಲೇಜೊಂದರ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿತ್ತು. ಆಹಾರ ಅರಸುತ್ತಾ ಬಂದಿದ್ದ ಆನೆ ಕಾಲೇಜು ಆವರಣ ಪ್ರವೇಶಿಸಿ ಸಿಕ್ಕ ಸಿಕ್ಕ ಕಡೆ ಓಡಾಡಿತ್ತು. ಇದರಿಂದ ಗಾಬರಿಯಾದ ವಿದ್ಯಾರ್ಥಿಗಳು ಸಿಕ್ಕ ಸಿಕ್ಕ ಓಡಿದ್ದಾರೆ.

ಆನೆ ಆಗಮನದ ಹಿನ್ನಲೆಯಲ್ಲಿ ಕಾಲೇಜು ಸ್ಥಗಿತವಾಯಿತು. ಪ್ರಾಧ್ಯಾಪಕರು ವಿದ್ಯಾರ್ಥಿಗಳ ಸುರಕ್ಷತೆಯ ಹಿನ್ನಲೆಯಲ್ಲಿ ತರಗತಿಗಳನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಮನೆಗೆ ತೆರಳುವಂತೆ ಸೂಚಿಸಿದರು. ಆದರೆ ಕಾಲೇಜಿನ ಆವರಣದಲ್ಲೇ ಆನೆ ಇದ್ದಿದ್ದರಿಂದ ವಿದ್ಯಾರ್ಥಿಗಳು ಕಾಲೇಜು ಕಟ್ಟಡ ತೊರೆಯಲು ಹಿಂಜರಿದರು.

ಬಳಿಕ ಕಾಲೇಜು ಸಿಬ್ಬಂದಿ ಒಡಿಶಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಆನೆಯನ್ನು ಕಾಲೇಜು ಆವರಣದಿಂದ ಹೊರಕ್ಕೆ ಓಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಒಡಿಶಾದಲ್ಲಿ ಆನೆ ಹಾವಳಿ ಇದೇ ಮೊದಲೇನಲ್ಲ.. ಇತ್ತೀಚೆಗಷ್ಟೇ ಅಂದರೆ ಜನವರಿ 4ರಂದು ಒಡಿಶಾದ ಮಯೂರಭಂಜ್‌ ಜಿಲ್ಲೆಯ ದದ್ದೂರ್ ಗ್ರಾಮದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಆನೆಯ ದಾಳಿಯಿಂದ ಮೃತಪಟ್ಟಿದ್ದರು. ಮೃತ ವ್ಯಕ್ತಿಯನ್ನು ಮಧುಸೂದನ್ ಪಾಂಡೇ ಎಂದು ಗುರುತಿಸಲಾಗಿದ್ದು, ಈತ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT