ಯೋಗಿ ಆದಿತ್ಯನಾಥ್ online desk
ದೇಶ

ವಕ್ಫ್ ಹೆಸರಿನಲ್ಲಿ ಹೋಗಿರುವ ಪ್ರತಿ ಇಂಚು ಭೂಮಿ ವಾಪಸ್ ಪಡೆಯುತ್ತೇವೆ: ಯೋಗಿ ಆದಿತ್ಯನಾಥ್ ಶಪಥ!

ಖಾಸಗಿ ಸುದ್ದಿ ವಾಹಿನಿಯೊಂದು ಲಖನೌ ನಲ್ಲಿ ಆಯೋಜಿಸಿದ್ದ ಮಹಾಕುಂಭ ಮಹಾಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಸನಾತನ ಧರ್ಮದ ಆಸ್ತಿಕ ಪರಂಪರೆ ಜಗತ್ತಿನ ಪುರಾತನ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ.

ಲಖನೌ: ವಕ್ಫ್ ಹೆಸರಿನಲ್ಲಿ ಹೋಗಿರುವ ಪ್ರತಿ ಇಂಚು ಭೂಮಿಯನ್ನೂ ವಾಪಸ್ ಪಡೆಯುತ್ತೇವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶಪಥ ಮಾಡಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದು ಲಖನೌ ನಲ್ಲಿ ಆಯೋಜಿಸಿದ್ದ ಮಹಾಕುಂಭ ಮಹಾಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಸನಾತನ ಧರ್ಮದ ಆಸ್ತಿಕ ಪರಂಪರೆ ಜಗತ್ತಿನ ಪುರಾತನ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ, ಇದು ಯಾವುದೇ ಮತ ಅಥವಾ ಪಂಗಡಗಳಿಗೆ ಹೋಲಿಕೆಗೆ ನಿಲುಕದ್ದು ಎಂದು ಹೇಳಿದ್ದಾರೆ.

"ನಾನು ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿದ್ದೇನೆ, ಅದರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಘಟನೆಗಳು ಅಷ್ಟೇ ಪುರಾತನವಾಗಿವೆ. ಸನಾತನದ ಸಂಪ್ರದಾಯವು ಆಕಾಶಕ್ಕಿಂತ ಎತ್ತರವಾಗಿದೆ ಮತ್ತು ಹೋಲಿಕೆಯನ್ನು ಮೀರಿದೆ" ಎಂದು ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಬಗ್ಗೆ ಕಠಿಣ ನಿಲುವು ತಳೆದ ಅವರು, ಇದು ವಕ್ಫ್ ಮಂಡಳಿಯೋ ಅಥವಾ ಭೂ ಮಾಫಿಯಾಗಳ ಮಂಡಳಿಯೋ ಎಂದು ಹೇಳುವುದು ಕಷ್ಟ.

ತಮ್ಮ ಸರ್ಕಾರ ವಕ್ಫ್ ಕಾಯಿದೆಗೆ ತಿದ್ದುಪಡಿ ತಂದಿದೆ ಮತ್ತು ಎಲ್ಲಾ "ಆಕ್ರಮಿತ" ಭೂಮಿಯನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ವಕ್ಫ್‌ನ ನೆಪದಲ್ಲಿ ವಶಪಡಿಸಿಕೊಂಡಿರುವ ಪ್ರತಿಯೊಂದು ಇಂಚು ಭೂಮಿಯನ್ನು ನಾವು ವಾಪಸ್ ಪಡೆಯುತ್ತೇವೆ ಮತ್ತು ಬಡವರಿಗೆ ವಸತಿ, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸಲು ಬಳಸುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT