ಮೃತ ಯುವತಿ ಶುಭದಾ ಶಂಕರ್ ಕೊಡಾರೆ 
ದೇಶ

ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್‌ನಲ್ಲಿ ಇರಿದು ಕೊಂದ ಯುವಕ: ನೋಡ್ತಾ ನಿಂತ ಜನ, ಭೀಕರ ವಿಡಿಯೋ!

ಮೃತ ಯುವತಿಯನ್ನು 28 ವರ್ಷದ ಶುಭದಾ ಶಂಕರ್ ಕೊಡಾರೆ ಎಂದು ತಿಳಿದುಬಂದಿದೆ. ಶುಭದಾ ಪುಣೆ-ಸತಾರಾ ರಸ್ತೆಯ ಬಾಲಾಜಿನಗರ ಪ್ರದೇಶದಲ್ಲಿ ವಾಸವಾಗಿದ್ದು ಯೆರವಾಡಾದ ಪ್ರಸಿದ್ಧ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು.

ಪುಣೆ: ಯೆರವಾಡ ಪ್ರದೇಶದ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಆಕೆಯ ಸಹೋದ್ಯೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಆರೋಪಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ಯುವತಿಯನ್ನು 28 ವರ್ಷದ ಶುಭದಾ ಶಂಕರ್ ಕೊಡಾರೆ ಎಂದು ತಿಳಿದುಬಂದಿದೆ. ಶುಭದಾ ಪುಣೆ-ಸತಾರಾ ರಸ್ತೆಯ ಬಾಲಾಜಿನಗರ ಪ್ರದೇಶದಲ್ಲಿ ವಾಸವಾಗಿದ್ದು ಯೆರವಾಡಾದ ಪ್ರಸಿದ್ಧ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಕೊಲೆ ಪ್ರಕರಣ ಸಂಬಂಧ ಯೆರವಾಡ ಪೊಲೀಸರು 30 ವರ್ಷದ ಕೃಷ್ಣ ಸತ್ಯನಾರಾಯಣ್ ಕನೋಜ್ ಬಂಧಿಸಿದ್ದಾರೆ. ಆತನ ವಿರುದ್ಧ ಯೆರವಾಡ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಯುವತಿ ಮೂಲತಃ ಸತಾರ್‌ನವಳು. ಆರೋಪಿ ಕೃಷ್ಣ ಮತ್ತು ಯುವತಿ ಒಂದೇ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ, ಯುವತಿ ತನ್ನ ಕೆಲಸ ಮುಗಿಸಿ ಪಾರ್ಕಿಂಗ್ ಸ್ಥಳಕ್ಕೆ ಬಂದಿದ್ದಳು. ಆ ಸಮಯದಲ್ಲಿ ಅಲ್ಲಿ ಕಾಯುತ್ತಿದ್ದ ಕೃಷ್ಣ ಆ ಯುವತಿಯೊಂದಿಗೆ ಜಗಳವಾಡಲು ಪ್ರಾರಂಭಿಸಿದನು. ನಂತರ ಆಕೆಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದನು. ಯುವತಿಯ ಕಿರುಚಾಟ ಕೇಳಿ ಕಂಪನಿ ನೌಕರರು ಮತ್ತು ಭದ್ರತಾ ಸಿಬ್ಬಂದಿ ಅಲ್ಲಿಗೆ ಬಂದಿದ್ದರು. ಆದರೆ ಅವರು ಮೂಖ ಪ್ರೇಕ್ಷಕರಂತೆ ನಿಂತಿದ್ದಾರೆ. ಇನ್ನು ಹಲ್ಲೆ ಮಾಡಿದ್ದ ಕೃಷ್ಣ ಚಾಕುವನ್ನು ದೂರಕ್ಕೆ ಎಸೆದ ನಂತರ ಅಲ್ಲಿ ನೆರೆದಿದ್ದವರು ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ದಾಳಿಯ ಹಿಂದಿನ ನಿಜವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಂಪನಿಯೊಳಗೆ ಚಾಕುವನ್ನು ಹೇಗೆ ತಂದ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT