ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್​ಕೌಂಟರ್: ಮೂವರು ನಕ್ಸಲರ ಹತ್ಯೆ

ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳ ನಡೆಸಿದ ಎನ್​ಕೌಂಟರ್ ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಗೃಹ ಖಾತೆಯನ್ನು ಹೊಂದಿರುವ ಶರ್ಮಾ ರಾಯ್‌ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಜನವರಿ 6 ರಂದು ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಎಂಟು ಭದ್ರತಾ ಸಿಬ್ಬಂದಿ ಮತ್ತು ಅವರ ವಾಹನದ ಚಾಲಕ ಸಾವನ್ನಪ್ಪಿದ ಬಗ್ಗೆ ಉಲ್ಲೇಖಿಸಿದ ಉಪಮುಖ್ಯಮಂತ್ರಿ, "ನಕ್ಸಲರ ಹೀನ ಕೃತ್ಯದಿಂದ ಭದ್ರತಾ ಪಡೆಗಳು ಆಕ್ರೋಶಗೊಂಡಿವೆ" ಎಂದು ಹೇಳಿದರು.

"ನಾನು ಅವರನ್ನು (ಭದ್ರತಾ ಪಡೆಗಳು) ಭೇಟಿಯಾಗಿದ್ದೇನೆ. ನಮ್ಮ ಯೋಧರ ಶಕ್ತಿ ಮತ್ತು ಧೈರ್ಯದಿಂದ, ನಿಗದಿತ ಸಮಯದೊಳಗೆ ನಕ್ಸಲ್ ಬೆದರಿಕೆಯನ್ನು ನಿರ್ಮೂಲನೆ ಮಾಡಲಾಗುವುದು ಎಂದು ಪುನರುಚ್ಚರಿಸುತ್ತೇನೆ" ಎಂದರು.

ಇಂದು ಬೆಳಗ್ಗೆ, ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಎನ್‌ಕೌಂಟರ್ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ - ಸಿಆರ್‌ಪಿಎಫ್‌ನ ಗಣ್ಯ ಘಟಕ)ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT